News Karnataka Kannada
Sunday, May 05 2024
ಉಡುಪಿ

ರಾಷ್ಟ್ರದ ಹಿತಕ್ಕಾಗಿ ನಡೆಯುವ ಚುನಾವಣೆ, ಸಚಿವ ಕೋಟ ಹೇಳಿಕೆ

I am an MLA for my ward: Minister Kota Srinivas Poojary
Photo Credit : News Kannada

ಕುಂದಾಪುರ: ಈ ಬಾರಿ ಕರ್ನಾಟಕದಲ್ಲಿ ನಡೆಯುವ ಚುನಾವಣೆ ಜಾತಿ ವರ್ಗದ ಚುನಾವಣೆಯಲ್ಲ, ರಾಷ್ಟ್ರದ ಹಿತಕ್ಕಾಗಿ ನಡೆಯುವ ಚುನಾವಣೆ ಆಗಿದೆ ಈ ನಿಟ್ಟಿನಲ್ಲಿ ಮತದಾರರು ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರಿಗೆ ಮತವನ್ನು ನೀಡಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಳಿಕೊಂಡರು.

ಬೈಂದೂರು ಬಿಜೆಪಿ ಮಂಡಲದ ವತಿಯಿಂದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಭಾನುವಾರ ನಡೆದ ನನ್ನ ವಾರ್ಡಿಗೆ ನಾನೇ ಶಾಸಕ,ವಾರ್ಡ್ ವಾರಿಯರ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಸದ ಬಿ,ವೈ ರಾಘವೇಂದ್ರ ಮತ್ತು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಬೈಂದೂರು ಕ್ಷೇತ್ರದಲ್ಲಿ ಕೈಂಗೊಡಿರುವ ಅಭಿವೃದ್ಧಿ ಕಾರ್ಯಗಳೆ ಚುನಾವಣೆಗೆ ದಿಕ್ಸೂಚಿಯಾಗಲಿದೆ.ದೇಶವು ಸಮೃದ್ಧಿಯಾಗಿ ಅಭಿವೃದ್ಧಿಗೊಂಡು ವಿಶ್ವದಲ್ಲೇ ಶಕ್ತಿ ಶಾಲಿ ರಾಷ್ಟ್ರವಾಗಿ ರೂಪಗೊಳ್ಳಲು ದೇಶದ ಜನರು ಸ್ವಾಭಿಮಾನದಿಂದ ಬದುಕಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನಷ್ಟು ಕಾಲ ಪ್ರಧಾನ ಮಂತ್ರಿಯಾಗಿ ಮುಂದುವರೆಯಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ ಈ ಬಾರಿ ನಡೆಯುವ ಚುನಾವಣೆ ಹಣವಂತರದ್ದೊ,ಜಾತಿವಂತರದ್ದೊ ಚುನಾವಣೆಯಲ್ಲ ಇದು ಕಾರ್ಯಕರ್ತರ ಚುನಾವಣೆ ಆಗಿದೆ.ಮುಂದಿನ ಚುನಾವಣೆಯಲ್ಲಿ ಇನ್ನೊಬ್ಬ ಕಾರ್ಯಕರ್ತನಿಗೆ ಪಕ್ಷ ಅವಕಾಶ ನೀಡಿದರೆ ಅವರ ಪರವಾಗಿ ಕೆಲಸ ಮಾಡುತ್ತೇನೆ. ಕಾರ್ಯಕರ್ತರು ತೋರಿಸುವ ಪ್ರೀತಿ ವಿಶ್ವಾಸಗಳು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ ಎಂದರು.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಮಾಲತಿ ನಾಯ್ಕ್,ವಿವಿಧ ಮೋರ್ಚಾದ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು