ಉಡುಪಿ: ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಟೀಕಿಸಿದ್ದ ಶೋಭಾ ಕರಂದ್ಲಾಜೆಯವರಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ತಿರುಗೇಟು ನೀಡಿದ್ದಾರೆ.
ಶೋಭಾ ಕರಂದ್ಲಾಜೆಯವರೇ ನಿಮಗೆ ಧೈರ್ಯ ಇದ್ದರೆ ಪ್ರೆಸ್ ಮೀಟ್ ಕರೆದು ರಾಜ್ಯ ಸರಕಾರದ ಗ್ಯಾರಂಟಿಗಳನ್ನು ರದ್ದುಗೊಳಿಸುವಂತೆ ಹೇಳಿ ಎಂದು ಸವಾಲು ಹಾಕಿದ್ದಾರೆ.
ಶೋಭಾ ಅವರು ರಾಜಕೀಯದಲ್ಲಿ ನನಗಿಂತ ಹಿರಿಯರು, ಅನುಭವಸ್ಥರು. ನಾನು ಮೊದಲ ಬಾರಿ ಮಂತ್ರಿಯಾಗಿದ್ದಾನೆ. ಅವರು ಎರಡ್ಮೂರು ಬಾರಿ ಮಂತ್ರಿಯಾಗಿದ್ದಾರೆ. ಈಗ ಚುನಾವಣೆ ಹತ್ತಿರವಿದೆ ಎಂಬ ಕಾರಣಕ್ಕೆ ನಮ್ಮ ಯೋಜನೆಗಳನ್ನು ಟೀಕೆ ಮಾಡ್ತಿದ್ದಾರೆ. ಆದರೆ ನಾವು ಮಹಿಳಾ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆ ಜಾರಿಗೊಳಿಸಿದ್ದೇವೆ. ಅವರಿಗೆ ಧೈರ್ಯವಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸುವಂತೆ ಪ್ರೆಸ್ ಮೀಟ್ ಕರೆಯಲಿ ಎಂದು ಟಾಂಗ್ ನೀಡಿದರು.