ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ವತಿಯಿಂದ ಕುಂದಾಪುರ ಚಿಕ್ಕನ್ಸಾಲ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗವೀರ ಭವನ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮೊಗವೀರ ಭವನವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಪ್ರಮೋದ್ ಮಧ್ವರಾಜ್, ನಾಡೋಜ ಡಾ.ಜಿ.ಶಂಕರ್, ಆನಂದ್ ಸಿ ಕುಂದರ್, ಸುರೇಶ್ ಕಾಂಚನ್, ಉದಯ್ ಕುಮಾರ್ ಹಟ್ಟಿಯಂಗಡಿ, ರಾಜು ವಂಡ್ಸೆ ಹಾಗೂ ಮೊಗವೀರ ಸಮಾಜದ ಪ್ರಮುಖರು, ಘಟಕದ ಅಧ್ಯಕ್ಷರು, ಸಮಾಜ ಭಾಂದವರು ಉಪಸ್ಥಿತರಿದ್ದರು.