ನಿಟ್ಟೆ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು ನ್ಯಾನೊಮೆಟೀರಿಯಲ್ಸ್ ಮತ್ತು ಇಂಧನ ಸಾಧನಗಳ ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದೆ.
ಪ್ರಯೋಗಾಲಯವನ್ನು ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಎನ್ಸಿಎಲ್ ಪುಣೆಯ ವಿಜ್ಞಾನಿ ಡಾ.ನಾಯಕ ಜಿ.ಪಿ., ಉಪಪ್ರಾಂಶುಪಾಲ ಡಾ. ಐ.ಆರ್.ಮಿತ್ತಂತಾಯ, ಪರೀಕ್ಷಾ ನಿಯಂತ್ರಕ ಡಾ.ಶ್ರೀನಿವಾಸ ರಾವ್ ಬಿ.ಆರ್., ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ ಪೈ ಪಿ., ಲ್ಯಾಬ್ ಉಸ್ತುವಾರಿ ಡಾ.ಸಂತೋಷ್ ಜಿ ಅವರ ಸಮ್ಮುಖದಲ್ಲಿ ಅ.೨೭ ರಂದು ಉದ್ಘಾಟಿಸಿದರು.
ಪ್ರಯೋಗಾಲಯವು ಬಯೋಲಾಜಿಕ್ ಎಸ್ ಪಿ 50 ಇ ಎಲೆಕ್ಟ್ರೋಕೆಮಿಕಲ್ ವರ್ಕ್ ಸ್ಟೇಷನ್ ಅನ್ನು ಹೊಂದಿದೆ, ಇದನ್ನು ಬ್ಯಾಟರಿಗಳು, ಸೂಪರ್ ಕೆಪಾಸಿಟರ್ ಗಳು, ಇಂಧನ ಕೋಶಗಳು ಮತ್ತು ಸೌರ ಕೋಶಗಳಂತಹ ವಿವಿಧ ಶಕ್ತಿ ಶೇಖರಣಾ ಸಾಧನಗಳ ಅಪ್ಲಿಕೇಶನ್ ಗಳ ನಡವಳಿಕೆಯನ್ನು ಅಧ್ಯಯನ ಮಾಡಲು ಬಳಸಬಹುದು. ವಿವಿಧ ಕ್ಷೇತ್ರಗಳಲ್ಲಿ ಬಳಸುವ ವಿವಿಧ ಸಂವೇದಕ ಅನ್ವಯಿಕೆಗಳನ್ನು ಅಧ್ಯಯನ ಮಾಡಲೂ ಉಪಕರಣವನ್ನು ಬಳಸಬಹುದು.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…