News Karnataka Kannada
Monday, April 29 2024
ಉಡುಪಿ

2047ರ ವೇಳೆಗೆ ಭಾರತ ಸೂಪರ್ ಪವರ್ ರಾಷ್ಟ್ರ: ಸಚಿವೆ ಶೋಭಾ ಕರಂದ್ಲಾಜೆ 

India will be a superpower by 2047: Shobha Karandlaje 
Photo Credit : News Kannada

ಉಡುಪಿ: 2047ರ ವೇಳೆಗೆ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದ್ದು, ಇದಕ್ಕೆ ವಿದ್ಯಾರ್ಥಿಗಳ, ಯುವಜನತೆಯ ಪರಿಶ್ರಮ, ಕೊಡುಗೆ ಅಪಾರ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಪಿಪಿಸಿ ಆಡಿಟೋರಿಂನಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಛಾಯಾ ಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಕಳೆದ 9 ವರ್ಷಗಳ ಕೇಂದ್ರದ ಆಡಳಿತದಲ್ಲಿ ಅನೇಕ ಬದಲಾವಣೆಗಳನ್ನು ತರಲಾಗಿದೆ. ಪ್ರಧಾನಿ ಮೋದಿಯವರು ಕೃಷಿಗೆ ಸಂಬಂಧಿಸಿ, ಕೈಗಾರಿಕೆ ಹೀಗೆ ಅನೇಕ ಇಲಾಖೆಗಳ ಸಭೆ ಮಾಡ್ತಾರೆ. ಆದ್ರೆ ಎಲ್ಲಿಯೂ ಅವರು ರಾಜಕೀಯದ ಬಗ್ಗೆ ಮಾತನಾಡದೆ 2047ರ ಹೊತ್ತಿಗೆ ಕೃಷಿ ಕ್ಷೇತ್ರ ಯಾವ ಹೊಸ್ತಿಲಲ್ಲಿ ಇರಬೇಕು ಎನ್ನುವುದರ ಬಗ್ಗೆ ಯೋಚನೆ, ಯೋಜನೆ ಬಗ್ಗೆ ಮಾತನಾಡುತ್ತಾರೆ. ಇಂತಹ ಪ್ರಧಾನಿ ಸಿಕ್ಕ ಭಾರತೀಯರೇ ಧನ್ಯರು. 2047ರ ಹೊತ್ತಿಗೆ ಭಾರತ ಸೂಪರ್ ಪವರ್ ಆಗಬೇಕು ಎಂದು ಪ್ರದಾನಿ ಮೋದಿಯವರು ಸಂಕಲ್ಪ ಮಾಡಿ ಮುಂದಡಿ ಇಡುತ್ತಿದ್ದಾರೆ . ಇವರ ಈ ಸಂಕಲ್ಪಕ್ಕೆ ನೀವೂ ಸಹ ಕೈ ಜೋಡಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಪಿಪಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ, ಕೇಂದ್ರ ಸಂವಹನ ಇಲಾಖೆ ಇದರ ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ ಗೌಡ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು