ಉಡುಪಿ: ಬೆಳಗಾವಿಯಲ್ಲಿ ನಡೆದ ಜೈನ ಮುನಿಯ ಹತ್ಯೆಯನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರವಾಗಿ ಖಂಡಿಸಿದ್ದಾರೆ.
ಸ್ವತಂತ್ರ ಭಾರತದಲ್ಲಿ ಇಂತಹ ಕೃತ್ಯ ಖಂಡನೀಯ. ಓರ್ವ ಸಂತನಿಗೆ ಈ ರೀತಿಯಾದರೆ ಸಾಮಾನ್ಯ ಪ್ರಜೆಯ ಪಾಡೇನು? ಈ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇನ್ನು ಮುಂದೆ ಇಂತಹ ಕೃತ್ಯಗಳು ನಡೆಯಬಾರದು ಎಂದು ಶ್ರೀಗಳು ಹೇಳಿದ್ದಾರೆ.