ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಭೇಟಿಕೊಟ್ಟರು.
ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅವರನ್ನು ಬರಮಾಡಿಕೊಂಡರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಸಹಿತ ಹಲವು ಕಾಂಗ್ರೆಸ್ ನಾಯಕರು ಹೆಗ್ಡೆ ಅವರನ್ನು ಅಭಿನಂದಿಸಿದರು. ಬಳಿಕ ಹೆಗ್ಡೆ ಅವರು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆಚೆ ನಡೆಸಿದರು.