ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಪತ್ನಿ ಹಾಗೂ ಕುಟುಂಬಿಕರೊಂದಿಗೆ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಿದರು.
ಬೆಳಕಿನ ವ್ಯವಸ್ಥೆಯನ್ನು ಸರಿ ಪಡಿಸಲು ಮನವಿ: ಇವಿಎಂ ಯಂತ್ರದ ಬಳಿ ಮಂದ ಬೆಳಕು ಇದ್ದಿದ್ದರಿಂದ ಮತದಾರರಿಗೆ ಮತ ಚಲಾವಣೆ ಮಾಡಲು ತೊಂದರೆ ಆಗುತ್ತಿರುವುದನ್ನು ಗಮನಿಸಿದ ಗೋಪಾಲ ಪೂಜಾರಿ ಅವರು ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಮನವಿಯನ್ನು ಮಾಡಿದರು.