News Karnataka Kannada
Sunday, April 28 2024
ಉಡುಪಿ

ಕಾಪು: ಕೈಲಾಗದ ಶತ್ರು, ಅವರ ಕೊನೆಯ ಅಸ್ತ್ರವೇ ಅಪಪ್ರಚಾರ- ಕಿರಣ್ ಅಳ್ವ

Kapu: An incapable enemy, his last weapon is propaganda: Kiran Alva
Photo Credit : News Kannada

ಕಾಪು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಜನಸ್ತೋಮವನ್ನು ಕಂಡು ಬೆಚ್ಚಿ ಬಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ, ಚುನಾವಣೆಗೂ ಮುನ್ನವೇ ಅಪಪ್ರಚಾರದ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಪು ಬಿಜೆಪಿ ಮಾಧ್ಯಮ ವಿಭಾಗದ ಪ್ರಮುಖ್ ಕಿರಣ್ ಅಳ್ವ ವ್ಯಂಗ್ಯವಾಡಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಯವರು ಹೆಲಿಕ್ಯಾಫ್ಟರ್ ನಲ್ಲಿ ಹಣ ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಿದ್ದಾರೆ ಎಂಬ ಸೊರಕೆಯವರ ವಾದ ಸತ್ಯಕ್ಕೆ ದೂರವಾದುದು. ಇಂತಹ ಹಸಿ ಹಸಿ ಸುಳ್ಳುಗಳನ್ನೇ ಸತ್ಯ ಎನ್ನುವಂತೆ ಬಿಂಬಿಸುತ್ತಾ ಬಂದಿರುವ ಕಾಂಗ್ರೆಸ್ ಇಂದು ಅವಸಾನದ ಅಂಚಿಗೆ ಬಂದು ತಲುಪಿದೆ. ಇನ್ನಾದರು ಕಾಂಗ್ರೆಸಿಗರು ಪಾಠ ಕಲಿಯಬೇಕು, ಇಲ್ಲದಿದ್ದರೆ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಶಾಸಕ ಲಾಲಾಜಿ ಮೆಂಡನ್ ರವರು, ಈ ಬಾರಿ ಬರೋಬ್ಬರಿ 3,000 ಕೋ.ರೂಪಾಯಿಗೂ ಮಿಕ್ಕಿ ಅನುದಾನವನ್ನು ತಂದು ಸರ್ವಾಂಗೀಣ ಅಭಿವೃದ್ಧಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಗುರ್ಮೆ ಸುರೇಶ್ ಶೆಟ್ಟರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು