ಕಾರ್ಕಳ: ನನಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ ಶೆಟ್ಟಿ ಮುನಿಯಾಲು ಅವರು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ. ೫೦ರ ಹುಟ್ಟುಹಬ್ಬದ ಸಂಭ್ರಮದ ಜತೆಗೆ ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳ ಸನ್ಮಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅತ್ಯಂತ ಶ್ಲಾಘನೀಯ ಎಂದು ಕೇಮಾರು ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.
ಅವರು ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಮತ್ತು ಬ್ಲಾಕ್ ಕಾಂಗ್ರೆಸ್ ಹೆಬ್ರಿ ಮತ್ತು ಕಾರ್ಕಳ ವತಿಯಿಂದ ಉದಯ ಶೆಟ್ಟಿ ಮುನಿಯಾಲು ಅವರ ೫೦ನೇ ಹುಟ್ಟುಹಬ್ಬದ ಪ್ರಯುಕ್ತ ಪುಲ್ಕೇರಿ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ಮತ್ತು ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಜನಪ್ರತಿನಿಧಿಗಳು ಸರಕಾರದ ಅನುದಾನ ದೊರಕಿಸಿಕೊಡುವಲ್ಲಿಯೂ ಪತ್ನಿಯ ಕರಿಮಣಿ ಮಾರಿ ಕೊಟ್ಟಂತೆ ವರ್ತಿಸುತ್ತಾರೆ. ಅವರ ನಡುವೆ ಉದಯ ಶೆಟ್ಟಿ ಅವರು ದುಡಿಮೆಯ ಹಣದಲ್ಲಿ ನಿರಂತರ ಸಮಾಜ ಸೇವೆ ಗೈಯುತ್ತಿರುವುದನ್ನು ಸ್ವಾಮೀಜಿ ಪ್ರಶಂಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮಾತನಾಡಿ, ಉದಯ ಶೆಟ್ಟಿ ಅವರು ಕಾರ್ಕಳದ ಜನತೆಯ ಧ್ವನಿಯಾಗಬೇಕು. ಜನತೆಯ ಸಂಕಷ್ಟಕ್ಕೆ ಸ್ಪಂದಿಸುವಂತಹ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ನಾವು ಶ್ರದ್ದೆ, ಭಕ್ತಿ ಮತ್ತು ನಿಯತ್ತಿನಿಂದ ಜೀವನ ನಡೆಸಿದಾಗ ಬದುಕಿನಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಕಾರ್ಕಳದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ. ಕಾರ್ಯಕರ್ತರ ಬೇಡಿಕೆಗೆ ನಿರಂತರ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಎಸ್ಡಿಸಿಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಂದಿನ ಬಾರಿ ಕಾರ್ಕಳದ ಶಾಸಕರಾಗಿ ಉದಯ ಶೆಟ್ಟಿ ಆಯ್ಕೆಯಾಗಬೇಕು. ನಿರಂತರ ಜನಸೇವೆಯ ಮೂಲಕ ಜನರ ಮನಸ್ಸನ್ನು ಗೆಲ್ಲಬೇಕು ಎಂದರು. ವೇದಿಕೆಯಲ್ಲಿ ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಹಿರಿಯಂಗಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಚಂದ್ರಶೇಖರ ಬಾಯಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಮುಂಬೈ ಉದ್ಯಮಿಗಳಾದ ಗಿರೀಶ್ ಶೆಟ್ಟಿ ತೆಳ್ಳಾರ್, ಅಮಿತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬೃಹತ್ ರಕ್ತದಾನ ಮತ್ತು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉದಯ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನೆ ನೆರವೇರಿತು.
ಶುಭದ ರಾವ್ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು, ಸುಧಾಕರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು, ಸುಧಾಕರ ಶೆಟ್ಟಿ ಮುಡಾರು ವಂದಿಸಿದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…