ಕಾರ್ಕಳ: ಮಸೀದಿಯ ಆಡಳಿತ ಮಂಡಳಿಯ ಸದಸ್ಯರ ನಡುವೆ ಅಸಮಾಧಾನ ಉಂಟಾಗಿ ಮಸೀದಿಯ ಅಧ್ಯಕ್ಷನಿಗೆ ಚೂರಿಯಿಂದ ಇರಿಯಲು ಯತ್ನಿಸಿರುವ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ.
ಅಹಮ್ಮದ್ ಹುಸೈನ್ ಅವರು ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿದ್ದು,ಈದ್ ಮಿಲಾದ್ ಹಬ್ಬದ ಆಚರಣೆಯ ಪೂರ್ವಭಾವಿಯಾಗಿ ಮಸೀದಿಯಲ್ಲಿ ಮಿಲಾದ್ ಫೆಸ್ಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಅಹಮ್ಮದ್ ಹುಸೈನ್ ಅತಿಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಜಮಾತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಮಹಮ್ಮದ್ ಹಾಳೆಕಟ್ಟೆ ಎನ್ನುವಾತ ಏಕಾಎಕಿ ಚೂರಿಯನ್ನು ತಂದು ತಡೆದು ಅಹಮ್ಮದ್ ಹುಸೈನ್ ಗೆ ಇರಿಯಲು ಯತ್ನಿಸಿದ್ದಾರೆ.
ತಡೆಯಲು ಬಂದ ಮಸೀದಿ ಆಡಳಿತ ಮಂಡಳಿಯ ಕಾರ್ಯದರ್ಶಿ ಅಬ್ದುಲ್ ಜಬ್ಟಾರ್ಗೆ ಹೊಡೆದು ಇಬ್ಬರಿಗೂ ಕೊಲೆ ಬೆದರಿಕೆಯೊಡ್ಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.