News Karnataka Kannada
Thursday, May 02 2024
ಉಡುಪಿ

ಕಾರ್ಕಳ: ಮಸೀದಿಯ ಆಡಳಿತ ಮಂಡಳಿ ಸದಸ್ಯರ ನಡುವೆ ಅಸಮಾಧಾನ, ಅಧ್ಯಕ್ಷನಿಗೆ ಕೊಲೆ ಬೆದರಿಕೆ

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ  ಅನ್ನೋ ಕಾರಣಕ್ಕೆ ಲಿವ್ ಇನ್ ಪಾರ್ಟನರ್ ಆಗಿದ್ದ ಮಹಿಳೆಯನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit : Pixabay

ಕಾರ್ಕಳ: ಮಸೀದಿಯ ಆಡಳಿತ ಮಂಡಳಿಯ ಸದಸ್ಯರ ನಡುವೆ ಅಸಮಾಧಾನ ಉಂಟಾಗಿ ಮಸೀದಿಯ ಅಧ್ಯಕ್ಷನಿಗೆ ಚೂರಿಯಿಂದ ಇರಿಯಲು ಯತ್ನಿಸಿರುವ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ.

ಅಹಮ್ಮದ್‌ ಹುಸೈನ್‌ ಅವರು ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿದ್ದು,ಈದ್‌ ಮಿಲಾದ್‌ ಹಬ್ಬದ ಆಚರಣೆಯ ಪೂರ್ವಭಾವಿಯಾಗಿ ಮಸೀದಿಯಲ್ಲಿ   ಮಿಲಾದ್‌ ಫೆಸ್ಟ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಅಹಮ್ಮದ್‌ ಹುಸೈನ್‌ ಅತಿಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಜಮಾತ್‌ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಮಹಮ್ಮದ್‌ ಹಾಳೆಕಟ್ಟೆ ಎನ್ನುವಾತ ಏಕಾಎಕಿ ಚೂರಿಯನ್ನು ತಂದು ತಡೆದು ಅಹಮ್ಮದ್‌ ಹುಸೈನ್‌ ಗೆ ಇರಿಯಲು ಯತ್ನಿಸಿದ್ದಾರೆ.

ತಡೆಯಲು ಬಂದ ಮಸೀದಿ ಆಡಳಿತ ಮಂಡಳಿಯ ಕಾರ್ಯದರ್ಶಿ ಅಬ್ದುಲ್‌ ಜಬ್ಟಾರ್‌ಗೆ ಹೊಡೆದು  ಇಬ್ಬರಿಗೂ ಕೊಲೆ ಬೆದರಿಕೆಯೊಡ್ಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು