News Karnataka Kannada
Sunday, May 05 2024
ಉಡುಪಿ

ಕಾರ್ಕಳ: ಕೃಷಿ ತೋಟಕ್ಕೆ ಆಕಸ್ಮಿಕ ಬೆಂಕಿ, ಅಗ್ನಿಶಾಮಕದಳದ ನಿರ್ಲಕ್ಷ್ಯವೆಂದು ಆರೋಪ..!

Karkala: Fire breaks out in farm yard, fire brigade alleges negligence
Photo Credit : News Kannada

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‌ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು ರಕ್ಷಿಸಿದ್ದಾರೆ.

ಅಗ್ನಿಶಾಮಕದಳವರ ನಿರ್ಲಕ್ಷ್ಯವೆಂಬ ಆರೋಪ : ಕೃಷಿ ತೋಟಕ್ಕೆ ಬೆಂಕಿ ಬಿದ್ದು ಉರಿಯುತ್ತಿರುವ ಸಂದರ್ಭದಲ್ಲಿ ಸ್ಥಳೀಯರು ಕಾರ್ಕಳದ ಅಗ್ನಿಶಾಮಕದಳದವರನ್ನು ಫೋನ್ ಮಾಡಿ ಸಂಪರ್ಕಿಸಿದಾಗ ಸರಿಯಾದ ಸ್ಪಂದನೆ ಸಿಕ್ಕಿಲ್ಲವೆಂದು ಆರೋಪಿಸಿದ್ದಾರೆ. ನಮ್ಮಲ್ಲಿರುವ ಎರಡೂ ವಾಹನಗಳು ಬೇರೆ ಕಡೆ ಹೋಗಿವೆ ಎಂದು ತಿಳಿಸಿದ್ದು, ಬಳಿಕ ಮೂಡುಬಿದ್ರೆಯ ಅಗ್ನಿಶಾಮಕದಳವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಮೂಡಬಿದ್ರೆಗೆ ಸಂಪರ್ಕಿಸಿದಾಗ, ನಮ್ಮ ವಾಹನಗಳು ನೀರನ್ನು ತುಂಬಿಸಲು ಹೋಗಿದೆ ಎಂದು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಮಾರು 2-3 ಎಕರೆಯಷ್ಟು ಜಮೀನಿಗೆ ಬೆಂಕಿ ಬಿದ್ದು ಸುಟ್ಟು ಹೋದರೂ ಅಗ್ನಿಶಾಮಕದಳದವರ ಸರಿಯಾದ ಸ್ಪಂದನೆಯೇ ಸಿಗದೆ, ಸ್ಥಳೀಯರೇ ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು