Categories: ಉಡುಪಿ

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನಲ್ಲಿ ಭಾರತದ ಮೊಟ್ಟ ಮೊದಲ ಪರಿಸರ ಯೋಗ್ಯ ಶೌಚಾಲಯ ಅಳವಡಿಕೆ

ಕಾರ್ಕಳ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹುನಿರೀಕ್ಷಿತ ಸ್ವಚ್ಚ ಭಾರತ ಕಲ್ಪನೆಗೆ ಅನುಗುಣವಾಗಿ ಕರ್ನಾಟಕದ ಇಂಧನ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಅವರ ಪರಿಕಲ್ಪನೆಯಂತೆ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಭಾರತದ ಮೊಟ್ಟ ಮೊದಲ ಪರಿಸರ ಯೋಗ್ಯ ಶೌಚಾಲಯವನ್ನು ಅಳವಡಿಸಲಾಗಿದೆ.

ಭಾರತದ ರಕ್ಷಣಾ ಇಲಾಖೆಯಲ್ಲಿ (ಡಿ.ಆರ್.ಡಿ.ಓ) ಸುಮಾರು ಐವತ್ತು ವರ್ಷಗಳಿಂದ ಸಹಯೋಗ ಹೊಂದಿರುವ ತಮಿಳುನಾಡಿನ ಕೊಯಮುತ್ತೂರು  ಮೂಲದ ಮ್ಯಾಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಪ್ರಥಮ ಬಾರಿಗೆ (ಸ್ಮಾರ್ಟ್ ಇ ಟಾಯ್ಲೆಟ್)ಪರಿಸರ ಯೋಗ್ಯ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಇದನ್ನು ಮೊಡಿನ್ನೊ ಇನ್ನೋವೇಷನ್ ಇಂಡಿಯಾ ಪ್ರೈವೇಟ್ ಲಿ.ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಮೊದಲ ಶೌಚಾಲಯವನ್ನು ಉಡುಪಿ ಜಿಲ್ಲೆಯ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಅಳವಡಿಸಲಿದೆ.

ಸ್ವಚ್ಚ ಭಾರತ ಕಲ್ಪನೆಗೆ ಹೊಸ ಮುನ್ನುಡಿ. ಈ ಕಲ್ಪನೆ ಸಮಾಜದಲ್ಲಿ ಹೊಸ ಬದಲಾವಣೆಗೆ ಮುನ್ನುಡಿಯಾಗುವ ಜೊತೆಗೆ ನೀರಿನ ಸಂರಕ್ಷಣೆ ಯೊಂದಿಗೆ ಭೂಮಿ ತಾಯಿಯನ್ನು ಸಂಪೂರ್ಣವಾಗಿ ಸ್ವಚ್ಚವಾಗಿಡುವುದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಭಾರತದ ಕಲ್ಪನೆಗೆ ಸಂಪೂರ್ಣ ಸಹಕಾರವಾಗಲಿದೆ.

ಇದರ ವಿಶೇಷತೆಯೆಂದರೆ ಶೌಚಾಲಯದಲ್ಲಿ ಬಳಸಿದ ನೀರು ಮಾನವ ತ್ಯಾಜ್ಯದೊಂದಿಗೆ ಮ್ಯಾಕ್ ಬಯೋ ಡೈಜೆಸ್ಟರ್ ಮೂಲಕ ಯಾವುದೇ ರೀತಿಯ ವಿದ್ಯುತ್ ಅಥವಾ ಇಂಧನದ ಸಹಾಯವಿಲ್ಲದೆ ಮಾಲಿನ್ಯ ಸಂಸ್ಥೆ ನಿರೀಕ್ಷಿಸಿದ ಮಟ್ಟಕ್ಕೂ ಹೆಚ್ಚಿನ ರೀತಿಯಲ್ಲಿ ಶುದ್ದೀಕರಣಗೊಂಡು ಪುನಃ ಸೋಲಾರ್ ಪಂಪಿನ ಮೂಲಕ ಶೌಚಾಲಯದ ಮೇಲಿನ ಟ್ಯಾಂಕಿಗೆ ವರ್ಗಾವಣೆಯಾಗುತ್ತದೆ.ಇದರಿಂದ ಬಳಸಿದ ನೀರನ್ನು ಪುನಃ ಸಂರಕ್ಷಿಸಿದಂತಾಗುತ್ತದೆ.

*ಈ ಶೌಚಾಲಯವು ಕೇವಲ ೨೦ ದಿನಗಳಲ್ಲಿ ನಿರ್ಮಾಣ ಮಾಡಬಹುದಾಗಿದ್ದು ೩೦ ವರ್ಷಕ್ಕೂ ಹೆಚ್ಚಿನ ಕಾಲ ಬಾಳಿಕೆ ಬರುತ್ತದೆ.
*ಶೌಚಾಲಯದ ಒಳಗಡೆಯ ವಿನ್ಯಾಸ ಪಂಚತಾರಾ ಹೋಟೆಲ್ಗಳಲ್ಲಿರುವ ಶೌಚಾಲಯದಂತೆ ನೈರ್ಮಲ್ಯದಿಂದ ಕೂಡಿದೆ.ಇದನ್ನು ಗ್ರಾಮದ     ವಿದ್ಯುತ್ ಸಂಪರ್ಕ ಇಲ್ಲದ ಯಾವುದೇ ಕೂಡ ನಿರ್ಮಾಣ ಮಾಡಬಹುವುದಾಗಿದೆ.
* ಒಂದು ಸಾವಿರ ಲೀಟರ್ ಓವರ್ಹೆಡ್ ಟ್ಯಾಂಕ್ ಹೊಂದಿದೆ.
*ಅತ್ಯಾಧುನಿಕ ತಾಂತ್ರಕ ವ್ಯವಸ್ಥೆ ಬೆಳಕಿನ ವಿನ್ಯಾಸ ಹೊಂದಿದೆ.
*ಸ್ವಯಂ ಚಾಲಿತ ಶೌಚಲಯ ನೀರು,ಪ್ರಾಕ್ರತಿಕ ಗಾಳಿಬೆಳಕು ಸೌಕರ್ಯ ಸೇರಿದಂತೆ ಸಂಪೂರ್ಣ ಪರಿಸರ ಸ್ನೇಹಿ ಕಲ್ಪನೆಯಲ್ಲಿ ಮೂಡಿಬಂದಿದೆ.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

7 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

23 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

47 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago