Categories: ಉಡುಪಿ

ಕಾರ್ಕಳ: ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಹೇಳಿಕೆ ಖಂಡನೆ

ಕಾರ್ಕಳ: ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ. ನಿಮ್ಮ ಮಾತುಗಳು ಹತಾಶೆಯ ಪ್ರತೀಕವಾಗಿದೆ ಬೆದರಿಕೆಗಳಿಗೆ ಹೆದರುವ ಕಾರ್ಯಕರ್ತರು ನಾವಲ್ಲ ನಿಮ್ಮ ಎದುರಿಸುವ ಶಕ್ಕಿ ನಮ್ಮಲಿದೆ ಆದರೆ ಇನ್ನು ಮಾತನಾಡುವಾಗ ಎಚ್ಚರವಿರಲಿ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರ  ಶುಭದರಾವ್ ಹೇಳಿದ್ದಾರೆ.

ಟೈಗರ್ ಗ್ಯಾಂಗಿನ ಹೆಸರಿನಲ್ಲಿ ಮುತಾಲಿಕರು ಹಿಂದುಗಳ ಹತ್ಯೆ ಮಾಡಿದ್ದಾರೆ ಎಂಬ ತಮ್ಮ ಹೇಳಿಕೆ ಆಶ್ಚರ್ಯ ತಂದಿದೆ ದಾಖಲೆ ಇದೆ ಎನ್ನುತ್ತೀರಿ ಅದನ್ನು ಯಾಕೆ ಬಹಿರಂಗಪಡಿಸಿಲ್ಲ, ಹತ್ಯೆ ಬಗ್ಗೆ ಮಾಹಿತಿ ಇದ್ದರೂ ಮೌನ ವಹಿಸಿರುವುದೂ ಅಪರಾದವಲ್ಲವೆ? ಈ ಬಗ್ಗೆ ಶಾಸಕರನ್ನು ಸಾಕ್ಷಿಯಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಅಗ್ರಹಿಸುತ್ತೇನೆ.

ನಿಮ್ಮ ವಿರುದ್ದ ಮಾಡಿದ ಭ್ರಷ್ಟಾಚಾರ ಅರೋಪ ಎಲ್ಲವೂ ಸತ್ಯವಾಗಿದ್ದು ಅದಕ್ಕೆ ಇನ್ನೂ ಬದ್ದವಾಗಿದ್ದೇನೆ ಆದರೆ ಅದಕ್ಕೆ ಉತ್ತರಿಸುವ ದೈರ್ಯ ನಿಮಗಿಲ್ಲ. ಇನ್ನೂ ನಿಮ್ಮ ಭ್ರಷ್ಟಾಚಾರ ಬಯಲಿಗೆಳೆಯಲು ಭ್ರಷ್ಟಾಚಾರ ವಿರೋಧಿ ಸಮಿತಿಯನ್ನೇ ರಚನೆ ಮಾಡುತ್ತೇವೆ ಅದರಿಂದ ನಿಮ್ಮ ಬಂಡವಾಳ ಎಲ್ಲಾ ಹೊರಬರಲಿದೆ.

ನನನ್ನು ಚಿಲ್ಲರೆ ನಾಯಕ ಎಂದಿರಿ ಹೌದು ನಾನು ಚಿಲ್ಲರೆ ನಾಯಕನೇ ಯಾಕೆಂದರೆ ನನ್ನಲಿ ಇರುವುದ ಚಿಲ್ಲರೆ ಹಣ ನಿಮ್ಮ ಹಾಗೆ ಭ್ರಷ್ಟಾಚಾರದಿಂದ ಸಂಪಾದಿಸಿದ ಹಣವೂ ಇಲ್ಲ ಅಕ್ರಮ ಆಸ್ತಿಯೂ ಇಲ್ಲ, ಯಾರೋ ಕೊಟ್ಟ ಡೈಮಂಡ್ ನೆಕ್ಲೆಸ್ ಇಲ್ಲ, ಈವರೆಗೆ ಯಾವುದೇ ಅರೋಪ ಇಲ್ಲದೆ ಪ್ರಮಾಣಿವಾಗಿ ಸೇವೆ ಮಾಡುತ್ತಾ ಬಂದಿದೇನೆ ಇನ್ನೂ ಮಾಡುತ್ತೇನೆ.

ಮಾತಿನಲ್ಲಿ ನಾವು ಯಾರು ಸಭ್ಯತೆ ಮೀರಿಲ್ಲ ಅದು ನಮ್ಮ ಸಂಸ್ಕೃತಿಯೂ ಅಲ್ಲ, ಆದರೆ ಗೋಪಾಲ ಭಂಡಾರಿಯವರ ಬಗ್ಗೆ ಅವಹೇಳನವಾಗಿ ಮಾತನಾಡುವಾಗ, ಬಂಡಿಮಠದಲ್ಲಿ ಹಗಲು ರಾತ್ರಿ ಧರಣಿ ಮಾಡಿ ವೀರಪ್ಪ ಮೊಯಿಲಿಯವರನ್ನು ಹೀಯಾಳಿಸಿದಾಗ, ಸಿದ್ದರಾಮಯ್ಯ ಸೆಗಣಿ ತಿನ್ನಿ ಎಂದಾಗ ಕಾಂಗ್ರೇಸಿಗರು ನಪುಂಸಕರು ಎಂದಾಗ ನಿಮ್ಮ ಸಭ್ಯತೆ ಎಲ್ಲಿ ಹೋಗಿತ್ತು.

ನಮ್ಮ ಅಭ್ಯರ್ಥಿ 20 ದಿನದಲ್ಲಿ ಬಂದವರು ಎಂದಿರಿ ಆದರೆ ಅವರ ಸಾಮಾಜಿಕ ಸೇವೆ ಎದುರು ನೀವು ನಗಣ್ಯ ಅವರು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಜನಸೇವೆ ಮಾಡುತ್ತಿದ್ದಾರೆ ಎಷ್ಟೋ ಮನೆಗೆ ಬೆಳಕಾಗಿದ್ದಾರೆ, ಅವರು ಎಲ್ಲಾ ಕ್ಷೇತಗಳಲ್ಲಿ ನೀಡಿದ ಕೊಡುಗೆ ಎದುರು ನೀವು ಲೆಕ್ಕಕೆ ಇಲ್ಲ ನಿಮಗೆ ಆ ಅರ್ಹತೆಯೂ ಇಲ್ಲ ನಿಮ್ಮ ಪರ ಚಲಾವಣೆಯಾದ ಮತಕ್ಕಿಂತ ನಿಮ್ಮ ವಿರುದ್ದ ಚಲಾವಣೆಯಾದ ಮತಗಳೆ ಹೆಚ್ಚು ಎಂಬುದು ನೆನಪಿರಲಿ ಮಾತಿಗೆ ಹಿಡಿತವಿರಲಿ.

Ashika S

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

2 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

3 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

4 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

4 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

4 hours ago