ಕಾರ್ಕಳ: ಹೆಸರಾಂತ ಸಾವಯವ ಕೃಷಿಕನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನಿಲೆಬೆಟ್ಟು ಗುತ್ತುಮನೆ ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.
ನಿಲೆಬೆಟ್ಟು ಗುತ್ತುಮನೆ ನಿವಾಸಿ ಭಾಸ್ಕರ್ ಹೆಗ್ಡೆ ಅವರು ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ಇವರು ಇಂದು ಮುಂಜಾನೆ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಭಾಸ್ಕರ್ ಹೆಗ್ಡೆ ಅವರು ಕಾರ್ಕಳದ ಪರಿಸರದಲ್ಲಿ ಸಾವಯವ ಕೃಷಿಯಲ್ಲಿ ಮನೆಮಾತಾಗಿದ್ದರು. ಅಲ್ಲದೆ, ದುರ್ಗಾ ಪಂಚಾಯತ್ ನ ಸದಸ್ಯರಾಗಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.