ಕಾರ್ಕಳ: ತಾಲೂಕಿನ ಮುಡಾರು ಗ್ರಾಮದ ಕಡಾರಿಯಲ್ಲಿ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ‘ಸ್ವರ್ಣಾರತಿ – 2023’ ಹಾಗೂ ‘ಸರ್ವೋದಯ ಸಮ್ಮಿಲನ’ ಕಾರ್ಯಕ್ರ.ವನ್ನು ಉದ್ದೇಶಿಸಿ ಮಾತನಾಡಿದರು.
‘ಸ್ವರ್ಣಾ ಪಾವಿತ್ರ್ಯ ರಕ್ಷಣೆ ನಮ್ಮೆಲ್ಲರ ಹೊಣೆ’ ಎಂಬ ಧ್ಯೇಯೋಕ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವರ್ಣಾರತಿ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ತಾಲೂಕು ಮಟ್ಟದ ಕಾರ್ಯಕ್ರಮವಾಗಿ ನಡೆಸುವಂತಾಗಬೇಕೆಂದು ಸಚಿವ ವಿ. ಸುನೀಲ್ ಕುಮಾರ್ ಆಶಿಸಿದರು.
44 ವರ್ಷದಿಂದ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬಂದಿರುವ ಸರ್ವೋದಯ ಯುವಕ ಮಂಡಲದ ಪೂರ್ವಸದಸ್ಯರುಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಹಿರಿಯ ರಂಗಕಲಾವಿದ ಉಮೇಶ್ ರಾವ್, ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ನ ರಾಜ್ಯಾಧ್ಯಕ್ಷ ಡಾ.ರವೀಂದ್ರ ಶೆಟ್ಟಿ, ಡಾಕ್ಟರ್ ಪ್ರತೀಷ್ ಪ್ರಭು ರವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು, ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಊರಿನ ಗಣ್ಯರಾದ ಹರೀಶ್ ಸಾಲ್ಯಾನ್, ರವೀಂದ್ರ ಶೆಟ್ಟಿ, ರಾಮಚಂದ್ರ ಪ್ರಭು, ರತ್ನಾಕರ ಪೂಜಾರಿ, ರವೀಂದ್ರ ಪ್ರಭು, ಸಾಧು ಪೂಜಾರಿ, ನವೀನ್ ಪಾಲ್, ಉಮೇಶ್ ರಾವ್, ಜಗದೀಶ್ ಬರ್ವೆ, ಪಂಚಾಯತ್ ಸದಸ್ಯರಾದ ಹರೀಶ್ ಪೂಜಾರಿ ಹಾಗೂ ಸರಸ್ವತಿ ಆಚಾರ್ಯ, ಯುವಕ ಮಂಡಲದ ಅಧ್ಯಕ್ಷರಾದ ಅಶೋಕ್ ನಾಯ್ಕ್, ಮಹಿಳಾ ಮಂಡಲದ ಅಧ್ಯಕ್ಷರಾದ ಮಾಲತಿ ನಾಯ್ಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನಾಗೇಶ್ ರವರು ಕಾರ್ಯಕ್ರಮ ನಿರೂಪಿಸಿದರು.