ಕಾರ್ಕಳ : ಜನವರಿ ಏಳರಂದು ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ‘ ಪ್ರಕೃತಿ ಸಂಭ್ರಮ’ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಶಾಲಾ ವಾರ್ಷಿಕೋತ್ಸವನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ ನಾಗರಾಜ್ ಹಾಗೂ ಪ್ರೊಫೆಸರ್ ಸುಬ್ರಹ್ಮಣ್ಯ ಭಟ್,ಕರುಣಾಕರ್ ಎಸ್ ಕೋಟ್ಯಾನ್ (ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರು ) ಸಾಣೂರಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಹಾಗೂ ಮಾಜಿ ಕಾಂತಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ರಾಜೇಶ್ ಕೋಟ್ಯಾನ್ ರವರು ಆಗಮಿಸಿದ್ದರು.
ಈ ಶುಭ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ರಾದ ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ತ , ಆಡಳಿತ ನಿರ್ದೇಶಕ ರಾದ ಅಶೋಕ್ ಕುಮಾರ , ಸಂಸ್ಥೆಯ ಮೇಲ್ವಿಚಾರಕರಾದ ಹರೀಶ ಶೆಟ್ಟಿ ರವರು ಉಪಸ್ಥಿತರಿದ್ದು, ಜ್ಯೋತಿ ಬೆಳಗುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಟಿ .ಡಿ ನಾಗರಾಜ್ ರವರು ವಿದ್ಯಾರ್ಥಿಗಳು ಹೆತ್ತವರಿಗೆ ಮತ್ತು ಗುರುಗಳಿಗೆ ಗೌರವಿಸಬೇಕು,ಅವರ ಮಾರ್ಗದರ್ಶನದಲ್ಲಿ ಮುನ್ನೆಡಬೇಕೆಂದು ತಿಳಿಸಿದರು.
ಸುಬ್ರಹ್ಮಣ್ಯ ಭಟ್ ರವರು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಿಡಿಸಿಕೊಳ್ಳಿ ಎಂದು ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಾಗರಾಜ್ ರಾವ್ ರವರು ಶಾಲಾ ವಾರ್ಷಿಕ ವರದಿಯನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ತರಗತಿವಾರು ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸ್ಪರ್ಧೆ ಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾಸಿಲಾಯಿತು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ನಾಟಕದ ಮೂಲಕ ಮನರಂಜನೆಯನ್ನು ನೀಡದರು. ಪ್ರೌಢಶಾಲಾ ವಿದ್ಯಾರ್ಥಿನಿ ಜಹಾರ ಕಾರ್ಯ ಕ್ರಮವನ್ನು ನಿರೂಪಿಸಿ, ಪ್ರೌಢಶಾಲಾ ಪ್ರಾಂಶುಪಾಲರಾದ ಶ್ರೀಪ್ರಸಾದ್ ರವರು ಸ್ವಾಗತಿಸಿ, ಪ್ರಭಾರ ಪ್ರಾಂಶುಪಾಲೆ ಯಾದದ ಕುಮಾರಿ ವಿನ್ಯಾರವರು ಎಲ್ಲರಿಗೂ ವಂದಿಸಿದರು.