ಕಾರ್ಕಳ: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಜಂಟಿ ಸಹಕಾರದಲ್ಲಿ ೧೯ನೇ ವರ್ಷದ ಲವ-ಕುಶ ಜೋಡುಕರೆ ಕಂಬಳಕೂಟವು ಜನವರಿ ೮ರಂದು ಮಿಯ್ಯಾರಿನಲ್ಲಿ ಜರಗಲಿರುವುದು.
ಬೆಳಗ್ಗೆ೮ ಗಂಟೆಗೆ ಸಚಿವ ವಿ. ಸುನೀಲ್ ಕುಮಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಿದ್ದಾರೆ. ಸಂಜೆ ೭.೦೦ ಗಂಟೆಗೆ ನೂತನ ಸಭಾವೇದಿಕೆ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ಸಿ ಆನಂದಸಿಂಗ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾಗಿರುವ ಎಸ್ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಮಾಜಿಮುಖ್ಯಮಂತ್ರಿ ಎಂ ವೀರಪ್ಪಮೊಯ್ಲಿ,ಶಾಸಕ ಉಮಾನಾಥ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಾಕಾರಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ರಾಜೇಂದ್ರಕುಮಾರ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಬೆಳೆಗ್ಗೆ ನೇಗಿಲು ಕಿರಿಯ ವಿಭಾಗದ ಕೋಣಗಳಿಗೆ ೮ ರಿಂದ೯.೦೦ ಗಂಟೆಯ ತನಕ ಕರೆಗೆ ಇಳಿಯಲು ಅವಕಾಶ ಅನಂತರ ನೇರವಾಗಿ ಚಾನ್ನಗೆ ಓಡಿಸಬೇಕು. ಸಮಿತಿಯ ತೀರ್ಮಾನಕ್ಕೆ ಬದ್ಧರಾಗಿರಬೇಕು. ಜಿಲ್ಲಾ ಸಮಿತಿ ಹಾಗು ಮಿಯ್ಯಾರು ಕಂಬಳ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಜೀವನ್ ದಾಸ್ ಅತ್ಯಂತ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.