News Karnataka Kannada
Saturday, May 18 2024
ಉಡುಪಿ

ಕಾರ್ಕಳ: ಕುಡಿಯುವ ನೀರಿನ ಸಮಸ್ಯೆ, ಸಾಣೂರು ಗ್ರಾಮಸ್ಥರಿಂದ ಪ್ರತಿಭಟನೆ

Karkala: Villagers of Sanoor protest against playing with life in the name of national highway development
Photo Credit : News Kannada

ಕಾರ್ಕಳ: ಮೂಡಬಿದಿರೆ- ಕಾರ್ಕಳ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ನೆಪದಲ್ಲಿ ಸಾಣೂರು ಪರಿಸರದಲ್ಲಿ ಕುಡಿಯುವ ನೀರಿನ ಪೈಪ್ ಗಳನ್ನು ಕಿತ್ತು ಹಾಕಿರುವುದರಿಂದ ಕುಡಿಯುವ ನೀರಿನ ಸಮಸ್ಸೆ ಎದುರಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಸಾಣೂರು ಗ್ರಾಮ ಪಂಚಾಯತ್ ಸರಹದ್ದಿ ಬೈಪಾಸ್ ನಿಂದ ಮುರತ್ತಂಗಡಿ ಯ ತನಕ ಅಲ್ಲಲ್ಲಿ ಕುಡಿಯುವ ನೀರಿನ ಪೈಪ್ ಗಳನ್ನು ಕಿತ್ತು ಹಾಕಿರುವ ಪರಿಣಾಮವಾಗಿ ಮನೆಗಳಿಗೆ ಹಾಗೂ ವ್ಯವಹಾರ ಕೇಂದ್ರಗಳಿಗೆ ಕುಡಿಯುವ ನೀರು ಸರಬರಾಜು ಮೊಟಕುಕೊಂಡಿದೆ.

ಈ ಕುರಿತು ಸ್ಥಳೀಯ ನಿವಾಸಿಗಳು ಕಾಮಗಾರಿ ವಹಿಸಿಕೊಂಡಿರುವ ದಿಲೀಪ್ ಸಂಸ್ಥೆ ಯ ವಾರಿಸ್ತುದಾರರ ಗಮನಕ್ಕೆ ತಂದರೂ ಕ್ಯಾರೇ ಅನ್ನದೇ ಇರುವುದರಿಂದ ಸಮಸ್ಯೆ ಯಥಾಸ್ಥಿತಿ ಯಲ್ಲಿದೆ.

ಗ್ರಾಮಸ್ಥರ ಪ್ರತಿಭಟನೆ
ಗುರುವಾರ ಬೆಳಿಗ್ಗೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಮೂಲ ಸೌಕರ್ಯ ಕಸಿದುಕೊಂಡಿರುವುದರಿಂದ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ ಕಾಮಗಾರಿಗೆ ಅವಕಾಶ ನೀಡಲಾರೆವು. ಕಿತ್ತು ಹಾಕಿದ ಕುಡಿಯುವ ನೀರಿನ ಪೈಪ್ ಗಳನ್ನು ಮರು ಜೋಡಣೆಯ ಬಳಿಕ ರಸ್ತೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳಕ್ಕೆ ಅಗಮಿಸಿದ ಮುಖಂಡರುಗಳು ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ನಡೆದಿದ್ದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉದಯ ಕೋಟ್ಯಾನ್, ಸಾಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಸಾಣೂರು ನರಸಿಂಹ ಕಾಮತ್, ಕರುಣಾಕರ ಕೋಟ್ಯಾನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಸಾದ್ ಪೂಜಾರಿ ಸಹಿತ ಇತರರು ಉಪಸ್ಥಿತರಿದ್ದರು. ನಗರ ಠಾಣಾಧಿಕಾರಿ ಪ್ರಸನ್ನ ಘಟನಾ ಸ್ಥಳಕ್ಕೆ ಅಗಮಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು