ಉಡುಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಕಾವೇರಿ ನಿರ್ವಹಣಾ ಮಂಡಳಿ ಪ್ರಾಧಿಕಾರಕ್ಕೆ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾಕಾರರು ದಿಕ್ಕಾರ ಕೂಗಿದರು. ರಕ್ತ ಕೊಟ್ಟೆವೂ ತಮಿಳುನಾಡಿಗೆ ನೀರು ಕೊಡೆವು. ಕಾವೇರಿ ನೀರು ನಮ್ಮ ಹಕ್ಕು, ಕಾವೇರಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂಬ ಘೋಷಣೆ ಕೇಳಿಬಂತು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷ ಸುಂದರ್ ಎ. ಬಂಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಪಾಂಗಾಳ, ಜಿಲ್ಲಾ ಸಲಹೆಗಾರ ಲಕ್ಷ್ಮೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕುಶಲ್ ಅಮೀನ್ ಬೆಂಗ್ರೆ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರುಗಳಾದ ದೇವಕಿ ಬಾರ್ಕೂರ್, ಶಾಲಿನಿ ಸುರೇಂದ್ರ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಅನುಷಾ ಆಚಾರ್ಯ ಪಳ್ಳಿ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಾಂಗಾಳ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ-ಸಂಘಟನಾ ಕಾರ್ಯದರ್ಶಿಗಳಾದ ಲಕ್ಷ್ಮೀ ಬಾಯಿ, ವಿಶಾಲಾಕ್ಷಿ, ಜಿಲ್ಲಾ ಮಹಿಳಾ ಸಾಂಸ್ಕೃತಿಕ ಕಾರ್ಯದರ್ಶಿ ಸುಲತಾ ಆಚಾರ್ಯ, ಉಡುಪಿ ತಾಲೂಕು ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷರಾದ ಮಮತಾ, ಉಡುಪಿ ತಾಲೂಕು ಮಹಿಳಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ, ಉಡುಪಿ ತಾಲೂಕು ಮಹಿಳಾ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಉಡುಪಿ ತಾಲೂಕು ಉಪಾಧ್ಯಕ್ಷ ಸುಧೀರ್ ಭಂಡಾರಿ, ಕಾಪು ತಾಲೂಕು ಅಧ್ಯಕ್ಷರಾದ ಆನಂದ್ ಶೆಟ್ಟಿ, ಕಾಪು ತಾಲೂಕು ಮಹಿಳಾ ಅಧ್ಯಕ್ಷರಾದ ಶಶಿಕಲಾ ನವೀನ್, ಕಾಪು ತಾಲೂಕು ಉಪಾಧ್ಯಕ್ಷ ಮಂಜುನಾಥ್, ಜಿಲ್ಲಾ ಸದಸ್ಯರುಗಳಾದ ಉದಯ್ ಸೇರಿಗಾರ್, ಜಯ ಸಾಲ್ಯಾನ್, ಸರಿತಾ, ಹಾಗೂ ಉಡುಪಿ ಮತ್ತು ಕಾಪು ತಾಲೂಕು ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.