Categories: ಉಡುಪಿ

ಕಾರವಾರ: ನಗರದ ಕಡಲತೀರ ಸ್ವಚ್ಛತಾ ಅಭಿಯಾನ

ಕಾರವಾರ: ಸೆಪ್ಟೆಂಬರ್ ನಲ್ಲಿ ಭಾರತ ಆಯೋಜಿಸಲಿರುವ ಜಿ-20 ಶೃಂಗಸಭೆಯ ಅಂಗವಾಗಿ ದೇಶದ ವಿವಿಧೆಡೆ ವಿವಿಧ ಚಟುವಟಿಕೆಗಳನ್ನ ಆಯೋಜಿಸಲಾಗುತ್ತಿದ್ದು, ಅದರ ಭಾಗವಾಗಿ ಕರ್ನಾಟಕದ ಕರಾವಳಿಯಲ್ಲಿಂದು ಕಡಲತೀರ ಸ್ವಚ್ಛತೆಯ ಬೃಹತ್ ಅಭಿಯಾನ ನಡೆಸಲಾಯಿತು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದರ ಹಿನ್ನಲೆ ದೇಶದಾದ್ಯಂತ ಏಕಕಾಲಕ್ಕೆ ಬೃಹತ್ ಕಡಲತೀರ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲೂ ಸ್ವಚ್ಛತೆ ಕೈಗೊಳ್ಳಲಾಯಿತು. ಅರಣ್ಯ ಇಲಾಖೆ, ನೆಹರೂ ಯುವ ಕೇಂದ್ರ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಿದ್ದು, ಈ ಮೂಲಕ ಕಡಲಪರಿಸರವನ್ನು ಸ್ವಚ್ಛವಾಗಿಡುವ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

ಕಡಲಪರಿಸರದ ಮಾಲಿನ್ಯದಿಂದ ಕಡಲಜೀವಿಗಳಿಗೆ ಮಾತ್ರವಲ್ಲದೇ ಮಾನವನ ಜೀವನದ ಮೇಲೂ ಪರಿಣಾಮ ಬೀರುವ ಹಿನ್ನಲೆ ಸ್ವಚ್ಛ ಕಡಲಿನ ಗುರಿಯೊಂದಿಗೆ ಕಡಲತೀರದ ಸ್ವಚ್ಛತೆಯನ್ನ ಹಮ್ಮಿಕೊಂಡಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಕೋಸ್ಟ್ಗಾರ್ಡ್, ಎನ್ಸಿಸಿ, ಎನ್ಎಸ್ಎಸ್, ಕೋಸ್ಟಲ್ ಎಂಡ್ ಮರೈನ್ ಇಕೋ ಸಿಸ್ಟಮ್ ಕಾರವಾರ ಘಟಕ, ಕಡಲಉತ್ಸವ ತಂಡ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಸಾಥ್ ನೀಡಿದ್ದರು.

ಮೂರು ತಂಡಗಳನ್ನಾಗಿ ವಿಭಾಗಿಸಿಕೊಂಡು ಸುಮಾರು 2 ಕಿಮೀನಷ್ಟು ವಿಶಾಲವಾಗಿರುವ ಟ್ಯಾಗೋರ್ ಕಡಲತೀರದಲ್ಲಿ ಒಂದು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯವನ್ನ ಕೈಗೊಳ್ಳಲಾಯಿತು. ಈ ವೇಳೆ ಕಡಲತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಗಾಜಿನ ಬಾಟಲ್ಗಳು ಸೇರಿ ಸುಮಾರು ಹತ್ತು ಚೀಲಗಳಷ್ಟು ತ್ಯಾಜ್ಯವನ್ನ ಸಂಗ್ರಹಿಸಲಾಯಿತು.

ಕಡಲತೀರ ವೀಕ್ಷಣೆಗೆ ಬರುವಂತಹ ಪ್ರವಾಸಿಗರು ಹಾಗೂ ಸಾರ್ವಜನಿಕರು ಕಸವನ್ನ ಎಲ್ಲೆಂದರಲ್ಲಿ ಎಸೆಯದೇ ಕಸದ ಬುಟ್ಟಿಗಳನ್ನ ಬಳಕೆ ಮಾಡಿ ಸ್ವಚ್ಚತೆ ಕಾಯ್ದುಕೊಳ್ಳುವಂತೆ ಅಭಿಯಾನದಲ್ಲಿ ಪಾಲ್ಗೊಂಡ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಈಶ್ವರ ಕಾಂದೊ, ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತಕುಮಾರ ಕೆ.ಸಿ., ಹಾಗೂ ಇನ್ನಿತರರು ಇದ್ದರು.

Ashika S

Recent Posts

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

8 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

10 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

23 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

30 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

35 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

38 mins ago