ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಎ.3ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಅವರು, ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಅದು ಮುಗಿದ ಬಳಿಕ ಕೋಟ ಅವರು ಮೆರವಣಿಗೆಯಲ್ಲಿ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ಪೂರಕವಾಗಿ ಬಿಜೆಪಿ ಉಡುಪಿ ಜಿಲ್ಲಾ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಕುಂದಾಪುರ ಸಮಾವೇಶವು ಮಾ.29ರಂದು ಸಂಜೆ 4ಗಂಟೆಗೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ಕಾಪು ಸಮಾವೇಶ ಮಾ.30ರ ಸಂಜೆ 4ಗಂಟೆಗೆ ಹೊಟೇಲ್ ಕೆಒನ್ ಹಾಲ್ನಲ್ಲಿ, ಉಡುಪಿ ಸಮಾವೇಶ ಎ.3ರಂದು 10:30ಕ್ಕೆ ಹಾಗೂ ಕಾರ್ಕಳ ಸಮಾವೇಶ ಎ.5ರ ಬೆಳಿಗ್ಗೆ 10:30ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಜಿಲ್ಲಾ ವ್ಯಾಪ್ತಿಯಲ್ಲಿ ಮಹಿಳಾ ಸಮಾವೇಶ, ಹಿಂದುಳಿದ ವರ್ಗಗಳ ಸಮಾವೇಶ ಹಾಗೂ ಯುವ ಕಾರ್ಯಕರ್ತರ ಯುವ ಮೋರ್ಚಾ ಸಮಾವೇಶವೂ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…