News Karnataka Kannada
Thursday, May 02 2024
ಉಡುಪಿ

ಕೇಂದ್ರದ ವಿರುದ್ಧ ರಾಜ್ಯ ಸರ್ಕಾರ ಸುಳ್ಳು ಆರೋಪ: ಕೋಟ ಶ್ರೀನಿವಾಸ ಪೂಜಾರಿ

ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ರಾಷ್ಟ್ರ ವಿರೋಧಿಗಳ ಬೆಂಬಲಿಗರ ಸ್ಪರ್ಧೆಯಾಗಿದೆ. ಸ್ವಾವಲಂಬಿ ರಾಷ್ಟ್ರ ನಿರ್ಮಾಣವೆ ಬಿಜೆಪಿ ಗುರಿಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾರ್ಕಳದಲ್ಲಿ ನ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ನಡೆದ ಚುನಾವಣಾ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
Photo Credit : NewsKarnataka

ಕಾರ್ಕಳ: ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ರಾಷ್ಟ್ರ ವಿರೋಧಿಗಳ ಬೆಂಬಲಿಗರ ಸ್ಪರ್ಧೆಯಾಗಿದೆ. ಸ್ವಾವಲಂಬಿ ರಾಷ್ಟ್ರ ನಿರ್ಮಾಣವೆ ಬಿಜೆಪಿ ಗುರಿಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕಾರ್ಕಳದಲ್ಲಿ ನ ಶಾಸಕ ಸುನಿಲ್ ಕುಮಾರ್ ಅವರ ವಿಕಾಸ ಕಛೇರಿಯಲ್ಲಿ ನಡೆದ ಚುನಾವಣಾ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ತಿಂಗಳಿಗೆ  22 ಲಕ್ಷ ಕ್ವಿಂಟಾಲ್ ಅಕ್ಕಿ ಕೇಂದ್ರ ಸರಕಾರವು ರಾಜ್ಯದ ಬಡವರಿಗೆ ಹಂಚುವ ಕೆಲಸ ಮಾಡುತ್ತಿದೆ‌. ಮುಖ್ಯಮಂತ್ರಿ ಸಿದ್ದಾರಮಯ್ಯರವರು ಬಡವರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರದ ನೀಡುತಿಲ್ಲ ಎಂದು ಸುಳ್ಳು ಹೇಳಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ದಲ್ಲಿ ಅಡಳಿತ ಮಾಡುತ್ತಿರುವ ಕಾಂಗ್ರೆಸ್ ಪಕ್ಷವು ಒಂದು ವರ್ಷದಲ್ಲಿ 9 ಮೀಟರ್ ರಸ್ತೆ ಸೇರಿದಂತೆ ಒಂದು ಅಂಗನವಾಡಿಯು ನಿರ್ಮಾಣ ಮಾಡಿಲ್ಲ, ಸಂದ್ಯಾ ಸುರಕ್ಷಾ, ವಿಧವಾ ವೇತನ ಪಿಂಚಣಿಯನ್ನು ರಾಜ್ಯ ಸರಕಾರವು ನಿಲ್ಲಿಸಿದೆ. ನೂರು ಸುಳ್ಳು ಹೇಳಿ ಒಂದು ಸತ್ಯ ಹೇಳಲು ಸಿದ್ದರಾಮಯ್ಯ ಹೊರಟಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ  ಗೆದ್ದರೆ ಗ್ಯಾರಂಟಿ ಗೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡು ಬರುತ್ತಿದೆ ಎಂದು ಹೇಳಿದರು.

ಹಿರಿಯ ಬಿಜೆಪಿ ಮುಖಂಡರಾದ ಬೋಳ ಪ್ರಭಾಕರ್ ಕಾಮತ್ ಕಛೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು‌. ಹಿರಿಯ ಮುಖಂಡ ಎಂಕೆ ವಿಜಯಕುಮಾರ್ ಮಾತನಾಡಿ ಐವತ್ತು ವರ್ಷಗಳ ಕಾಂಗ್ರೆಸ್ ಪಕ್ಷ ಕ್ಕೆ ಕಾಲ ಶುಕ್ಲಪಕ್ಷವಾಗಿದ್ದು ಮುಂದಿನ ಐವತ್ತು ವರ್ಷಗಳ ಕಾಲವು ಬಿಜೆಪಿಯು ಸುಭಿಕ್ಷವಾಗಿ ರಾಷ್ಟ್ರ ದಲ್ಲಿ ಅಡಳಿತ ಮಾಡಲಿದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು