ಉಡುಪಿ: ಹಿಂದಿನ ಸರಕಾರದ ಅವಧಿಯಲ್ಲಿ ನಾರಾಯಣಗುರುಗಳ ನಿಗಮ ಸ್ಥಾಪನೆ ಆಗಿದೆ. ಅದಕ್ಕೆ ಅನುದಾನವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ಇಂದು ಆಯೋಜಿಸಿದ ಬ್ರಹ್ಮಶ್ರಿ ನಾರಾಯಣಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಹ್ಮನ ಸೃಷ್ಟಿಯಲ್ಲಿ ಜಾತಿ, ಧರ್ಮಗಳಿರಬಹುದು. ಆದ್ರೆ ಬ್ರಹ್ಮ ಶ್ರೀ ನಾರಾಯಣಗುರುಗಳ ಸೃಷ್ಟಿಯಲ್ಲಿ ಒಂದೇ ಜಾತಿ, ಒಂದೇ ಮಾತು, ಒಂದೇ ದೇವರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಯಶ್ ಪಾಲ್ ಸುವರ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ವಿಜಯ ಕೊಡವೂರು, ಗಿರೀಶ್ ಅಂಚನ್, ಸಂತೋಷ್, ಸೆಲಿನ್ ಕರ್ಕಡ, ಮಾಜಿನಗರ ಸಭಾಧ್ಯಕ್ಷರಾದ ಕಿರಣ್ ಕುಮಾರ್, ಮೀನಾಕ್ಷಿ ಮಾಧವ ಬನ್ನಂಜೆ, ಡಿಡಿಪಿಐ ಗಣಪತಿ, ವಿಶೇಷ ಉಪನ್ಯಾಸ ನೀಡಿದ ಡಾ. ಗಣೇಶ್ ಅಮೀನ್ ಸಂಕಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.