News Karnataka Kannada
Monday, May 06 2024
ಉಡುಪಿ

ವಿದ್ಯುತ್ ದರ ಪರಿಷ್ಕರಣೆ ಆದೇಶ ವಾಪಸ್ ಪಡೆಯಿರಿ:  ಕೋಟ ಶ್ರೀನಿವಾಸ ಪೂಜಾರಿ‌ ಆಗ್ರಹ

Uttara Kannada: Chief Minister Basavaraj Bommai to meet on July 13
Photo Credit : News Kannada

ಉಡುಪಿ: ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ಸರಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.

ವಿಡಿಯೋ‌ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಂದಿನ ಸರಕಾರವೇ ವಿದ್ಯುತ್ ದರ ಏರಿಸಿತ್ತು ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ, ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕೆಇಆರ್ ಸಿ ವಿದ್ಯುತ್ ದರ ಏರಿಕೆಯ ಪ್ರಸ್ತಾವ ಸಲ್ಲಿಸುವುದು ರೂಢಿ. ನಮ್ಮ ಸರಕಾರ ಬೆಲೆಯೇರಿಕೆಗೆ ಅನುಮೋದನೆ ಕೊಟ್ಟಿರಲಿಲ್ಲ. ಚುನಾವಣೆ ಘೋಷಣೆಯಾದ ನಂತರ ಅಧಿಕಾರಿಗಳು ಅನುಮೋದನೆ ಕೊಟ್ಟಿರಬಹುದು ಎಂದರು.

ಸಾರ್ವಜನಿಕ ಹಿತಾಸಕ್ತಿಯ ಕಾರಣ ಮುಂದಿಟ್ಟು ಆದೇಶ ರದ್ದು ಮಾಡಿ. ನಮ್ಮ ಸರಕಾರ ಮಾಡಿದ ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳುತ್ತೀರಿ, ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದೀರಿ. ಅದೇ ರೀತಿ ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಸವಾಲು ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು