ಉಡುಪಿ: ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ಸರಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.
ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಂದಿನ ಸರಕಾರವೇ ವಿದ್ಯುತ್ ದರ ಏರಿಸಿತ್ತು ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ, ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕೆಇಆರ್ ಸಿ ವಿದ್ಯುತ್ ದರ ಏರಿಕೆಯ ಪ್ರಸ್ತಾವ ಸಲ್ಲಿಸುವುದು ರೂಢಿ. ನಮ್ಮ ಸರಕಾರ ಬೆಲೆಯೇರಿಕೆಗೆ ಅನುಮೋದನೆ ಕೊಟ್ಟಿರಲಿಲ್ಲ. ಚುನಾವಣೆ ಘೋಷಣೆಯಾದ ನಂತರ ಅಧಿಕಾರಿಗಳು ಅನುಮೋದನೆ ಕೊಟ್ಟಿರಬಹುದು ಎಂದರು.
ಸಾರ್ವಜನಿಕ ಹಿತಾಸಕ್ತಿಯ ಕಾರಣ ಮುಂದಿಟ್ಟು ಆದೇಶ ರದ್ದು ಮಾಡಿ. ನಮ್ಮ ಸರಕಾರ ಮಾಡಿದ ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳುತ್ತೀರಿ, ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದೀರಿ. ಅದೇ ರೀತಿ ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಸವಾಲು ಹಾಕಿದರು.