Categories: ಉಡುಪಿ

ವಿದ್ಯುತ್ ದರ ಪರಿಷ್ಕರಣೆ ಆದೇಶ ವಾಪಸ್ ಪಡೆಯಿರಿ:  ಕೋಟ ಶ್ರೀನಿವಾಸ ಪೂಜಾರಿ‌ ಆಗ್ರಹ

ಉಡುಪಿ: ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ಸರಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಒತ್ತಾಯಿಸಿದ್ದಾರೆ.

ವಿಡಿಯೋ‌ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಿಂದಿನ ಸರಕಾರವೇ ವಿದ್ಯುತ್ ದರ ಏರಿಸಿತ್ತು ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ, ಪ್ರತಿ ವರ್ಷ ಜನವರಿ ತಿಂಗಳಲ್ಲಿ ಕೆಇಆರ್ ಸಿ ವಿದ್ಯುತ್ ದರ ಏರಿಕೆಯ ಪ್ರಸ್ತಾವ ಸಲ್ಲಿಸುವುದು ರೂಢಿ. ನಮ್ಮ ಸರಕಾರ ಬೆಲೆಯೇರಿಕೆಗೆ ಅನುಮೋದನೆ ಕೊಟ್ಟಿರಲಿಲ್ಲ. ಚುನಾವಣೆ ಘೋಷಣೆಯಾದ ನಂತರ ಅಧಿಕಾರಿಗಳು ಅನುಮೋದನೆ ಕೊಟ್ಟಿರಬಹುದು ಎಂದರು.

ಸಾರ್ವಜನಿಕ ಹಿತಾಸಕ್ತಿಯ ಕಾರಣ ಮುಂದಿಟ್ಟು ಆದೇಶ ರದ್ದು ಮಾಡಿ. ನಮ್ಮ ಸರಕಾರ ಮಾಡಿದ ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳುತ್ತೀರಿ, ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದೀರಿ. ಅದೇ ರೀತಿ ವಿದ್ಯುತ್ ದರ ಪರಿಷ್ಕರಣೆ ಆದೇಶವನ್ನು ವಾಪಸ್ ಪಡೆಯಿರಿ ಎಂದು ಸವಾಲು ಹಾಕಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago