News Karnataka Kannada
Monday, May 06 2024
ಉಡುಪಿ

ಕುಂದಾಪುರ: ಬಸ್‌, ಕ್ಯಾಂಟರ್‌ ನಡುವೆ ಡಿಕ್ಕಿ 8 ಮಂದಿಗೆ ಗಾಯ

Rickshaw driver injured in series of accidents in Daregudde
Photo Credit : Pixabay

ಕುಂದಾಪುರ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸಹಿತ ಎಂಟು ಮಂದಿಗೆ ಗಂಭೀರ ಗಾಯಗಳಾಗಿವೆ.

ಲೋಕಲ್ ಸಂಚರಿಸುವ ಖಾಸಗಿ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ಕ್ಯಾಂಟರ್ ಡಿಕ್ಕಿ ಹೊಡೆದುಕೊಂಡಿವೆ. ವಿಪರೀತ ಮಳೆಯಿಂದಾಗಿ ರಸ್ತೆ ಕಾಣಿಸುತ್ತಿರಲಿಲ್ಲ ಎನ್ನಲಾಗಿದ್ದು, ಅಪಘಾತದ ಸ್ಥಳದಲ್ಲಿ ರಸ್ತೆಯ ಮೇಲೆಯೇ ಹೈ ಟೆನ್ಷನ್ ವಯರ್ ಗಳಿರುವ ವಿದ್ಯುತ್ ಕಂಬ ನೆಡಲಾಗಿರುವುದರಿಂದ ಕ್ಯಾಂಟರ್ ಚಾಲಕ ತೀರಾ ಎಡಗಡೆಗೆ ಚಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆ ಮೇಲೆಯೇ ವಿದ್ಯುತ್ ಕಂಬವಿರುವ ಬಗ್ಗೆ ಹಲವಾರು ಬಾರಿ ಮೆಸ್ಕಾಂ ಗಮನಕ್ಕೆ ತರಲಾಗಿದ್ದರೂ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಸ್ಥಳೀಯರು ಅಪಘಾತದಲ್ಲಿ ಗಾಯಗೊಂಡವರಿಗೆ ಮೆಸ್ಕಾಂ ಇಲಾಖೆಯೇ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರ ವಿವರ ಲಭ್ಯವಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು