News Karnataka Kannada
Friday, May 10 2024
ಉಡುಪಿ

ಕುಂದಾಪುರ: ಬಸ್ ಇಳಿಯುವಾಗ ವಿದ್ಯಾರ್ಥಿಯ ಮೇಲೆ ಬಸ್ ಚಲಿಸಿ ಸ್ಥಳದಲ್ಲೇ ಸಾವು

Kundapur: A student died on the spot after being run over by a bus
Photo Credit : News Kannada

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ.ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು.

ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾರೆ.

ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು