News Karnataka Kannada
Sunday, April 28 2024
ಉಡುಪಿ

ಕುಂದಾಪುರ: ನಾಳೆ ಕಟಪಾಡಿ, ಸಿದ್ದಾಪುರಕ್ಕೆ ಅಮಿತ್‌ ಶಾ

The Manipur conflict; All-party meeting chaired by Home Minister today
Photo Credit : Facebook

ಕುಂದಾಪುರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎ. 29ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಪೇಟೆಯಲ್ಲಿ ರೋಡ್‌ ಶೋ ನಡೆಸುವರು. ಕಟಪಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಸಿದ್ದಾಪುರಕ್ಕೆ ಬರಲಿದ್ದು, ಸಂಜೆ 4 ಗಂಟೆಗೆ ಪೇಟೆಯಲ್ಲಿ ರೋಡ್‌ ಶೋ ನಡೆಸಿ ಸಿದ್ದಾಪುರ ಸರ್ಕಲ್‌ನಲ್ಲಿ ತೆರೆದ ವಾಹನದಲ್ಲೇ ಜನರನ್ನುದ್ದೇಶಿಸಿ ಮಾತನಾಡುವರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಸಹಿತ ಹಲವರು ಪಾಲ್ಗೊಳ್ಳಲಿದ್ದು, 10 ಸಾವಿರಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಮತ್ತು ಡಿವೈಎಸ್‌ಪಿ ಬೆಳ್ಳಿಯಪ್ಪ ಅವರು ಭೇಟಿ ನೀಡಿ, ಭದ್ರತೆಯ ಪೂರ್ವ ತಯಾರಿಯ ಬಗ್ಗೆ ಪರಿಶಿಲಿಸಿದರು.

ಶಂಕರನಾರಾಯಣ, ಅಮಾಸೆಬೈಲು ಮತ್ತು ಕಂಡ್ಲೂರು ಪಿಎಸ್‌ಐಗಳು ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್‌ ನಿರ್ಮಿಸಲಾಗಿದೆ. ಸಚಿವರಿಗೆ ಜಡ್‌ ಪ್ಲಸ್‌ ಭದ್ರತೆ ಇರುವುದರಿಂದ 6 ಮಂದಿ ಇನ್‌ಸ್ಪೆಕ್ಟರ್‌ಗಳು, 20 ಮಂದಿ ಪಿಎಸ್‌ಐಗಳು, 160 ಮಂದಿ ಪೊಲೀಸ್‌ ಸಿಬಂದಿ, ಹಾಗೂ 100ಕ್ಕೂ ಹೆಚ್ಚು ಡಿಆರ್‌ ಪೊಲೀಸರನ್ನು ಬಿಗಿ ಭದ್ರತೆಗೆ ಬಳಸಲಾಗುತ್ತಿದೆ.

ಶನಿವಾರದಂದು ಸಿದ್ದಾಪುರ ಸುತ್ತಲಿನ ಬಾರ್‌ಗಳು ಬಂದ್‌ ಆಗಲಿವೆ. ಬಸ್‌ ನಿಲ್ದಾಣದಲ್ಲಿ ಮತಯಾಚನೆ ಮಾಡುವುದರಿಂದ ಬಸ್‌ ನಿಲ್ದಾಣದ ಪರಿಸರದ ಅಂಗಡಿ-ಮುಂಗಟ್ಟುಗಳು ಬಂದ್‌ ಆಗಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು