ಕುಂದಾಪುರ: 2023 ರ ಮೇ.10 ರಂದು ನಡೆಯಲಿರುವ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗಿ ತಯಾರಿಯನ್ನು ಮಾಡಿಕೊಂಡಿರುವ ಬಿಜೆಪಿ ಪಕ್ಷ ಹಲವಾರು ಲೆಕ್ಕಚಾರದ ಮೇಲೆ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಬಿಜೆಪಿ ಪಕ್ಷದ ಭದ್ರಕೋಟೆಯಂತ್ತಿರುವ ಕರಾವಳಿ ಭಾಗದಲ್ಲಿ ಅಧಿಕ ಸ್ಥಾನಗಳನ್ನು ಗೆದ್ದುಕೊಳ್ಳಲು ಪಣತೊಟ್ಟಿರುವ ಬಿಜೆಪಿ ಪಕ್ಷ ರಾಜಕೀಯ ಲೆಕ್ಕಚಾರದ ಪ್ರಕಾರ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನುವುದಕ್ಕೆ ರಾಜ್ಯ ನಾಯಕರುಗಳ ಹೇಳಿಕೆಗಳೆ ಇದಕ್ಕೆ ಪುಷ್ಟಿ ನೀಡಿದೆ.
ಬೈಂದೂರು ಕ್ಷೇತ್ರದ ಹಾಲಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಅವರಿಗೆ ಬಲ್ಲಮೂಲಗಳ ಪ್ರಕಾರ ಬಹುತೇಕ ಟಿಕೆಟ್ ಸಿಗುವುದು ಡೌಟ್. 3000 ಕೋಟಿಗೂ ಹೆಚ್ಚಿನ ಅನುದಾನವನ್ನು ತಂದು ಹಿಂದುಳಿದ ಬೈಂದೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿರುವ ಶಾಸಕರ ಮೇಲೆ ಪಕ್ಷದ ಕಾರ್ಯಕರ್ತರಿಗೆ ಒಲವು ಇಲ್ಲದೆ ಇರುವುದರಿಂದ ಅವರಿಗೆ ಮೈನಸ್ ಪಾಯಿಂಟ್ ಆಗಿದೆ,ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿಯೂ ಶಾಸಕರ ವಿರುದ್ಧವಾದ ಅಭಿಪ್ರಾಯ ಬಂದಿರುವುದರಿಂದ ಹೆಚ್ಚು ಕಮ್ಮಿ ಬಿ.ಎಂ ಸುಕುಮಾರ್ ಶೆಟ್ಟಿ ಟಿಕೆಟ್ ವಂಚಿತರಾಗಲಿದ್ದಾರೆ.
ಬಂಟ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗುವ ಸಾಧ್ಯತೆಗಳಿದ್ದು, ಚುನಾವಣೆಯಲ್ಲಿ ಒಂದು ಬಾರಿಯೂ ಸ್ಪರ್ಧೆ ಮಾಡದಿರುವ ಸಂಘದ ನಿಷ್ಠವಂತಾ ಕಾರ್ಯಕರ್ತ ಗುರುರಾಜ ಶೆಟ್ಟಿ ಗಂಟಿಹೊಳೆ ಮತ್ತು ಬೈಂದೂರು ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಪ್ರಣಯ್ ಕುಮಾರ್ ಶೆಟ್ಟಿ ಹೆಸರು ಮುಂಚೂಣಿಯಲ್ಲಿದೆ.
ಕುಂದಾಪುರದ ಹಾಲಿ ಶಾಸಕ ಶ್ರೀನಿವಾಸ ಶೆಟ್ಟಿ ಅವರು ಈಗಾಗಲೇ ಚುನಾವಣೆ ಕಣದಿಂದ ಹಿಂದೆ ಸರಿದಿದ್ದು ಚುನಾವಣೆಯಲ್ಲಿ ನಿಲ್ಲದಿರಲು ನಿರ್ಧಾರ ಮಾಡಿದ್ದಾರೆ.
ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಮಾಜಿ ಶಾಸಕ ದಿ.ಎಜಿ ಕೊಡ್ಗಿ ಅವರ ಮಗನಾದ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಕುಂದಾಪುರ ಟಿಕೆಟ್ ಸಿಗುವ ನಿರೀಕ್ಷೆ ಇದೆ.ಬಿಜೆಪಿ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಎಲ್ಲದಕ್ಕೂ ಉತ್ತರ ನೀಡಲಿದೆ. ಬೈಂದೂರು ಕ್ಷೇತ್ರದ ಹಾಲಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನಡೆಯ ಮೇಲೆ ಕೂತುಹಲ ಮೂಡಿಸಿದೆ.