Categories: ಉಡುಪಿ

ಕುಂದಾಪುರ: ಬಡಾಕೆರೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಗುದ್ದಲಿ ಪೂಜೆ

ಕುಂದಾಪುರ: ಕೋವಿಡ್ ಸಂಕಷ್ಟದಂತ ಸಂದರ್ಭದಲ್ಲಿಯೂ 3000 ಕೋಟಿ.ರೂ ವಿಶೇಷವಾದ ಅನುದಾನವನ್ನು ಬೈಂದೂರು ವಿಧಾನಸಭೆ ಕ್ಷೇತ್ರಕ್ಕೆ ತರಲಾಗಿದ್ದು ಕ್ಷೇತ್ರವನ್ನು ಸಮಗ್ರವಾದ ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗಿದೆ 60,000 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡುವಂತ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ ಎಂದು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

57.72 ಲಕ್ಷ.ರೂ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಬುಧವಾರ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

ನಾಡ ಗ್ರಾ.ಪಂ ಉಪಾಧ್ಯಕ್ಷೆ ಪದ್ದು ಪೂಜಾರ್ತಿ ಮತ್ತು ಸದಸ್ಯ ಶ್ರೀಧರ್ ಬಡಾಕೆರೆ,ಲೋಕೇಶ್ ಅಡಿಗರು,ಮಾಧವ ಅಡಿಗ,ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಅಶೋಕ್ ಶೆಟ್ಟಿ,ಶರತ್ ಶೆಟ್ಟಿ ಉಪ್ಪÅಂದ,ಗುರುರಾಜ್ ಬಡಾಕೆರೆ,ಮಹೇಶ್ ಪೂಜಾರಿ,ವಿಕ್ರಮ್,ಉಮೇಶ್ ಶೆಟ್ಟಿ ಕೋಣ್ಕಿ,ಸುಧೀರ್ ಕೋಣ್ಕಿ,ಪ್ರಥ್ವಿಶ್ ಕೋಣ್ಕಿ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

9 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

18 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

22 mins ago

ಎಚ್.ಡಿ.ಕೋಟೆ: ಕಬಿನಿ ಜಲಾಶಯಕ್ಕೆ ಹಾರಿ ನೌಕರ ಆತ್ಮಹತ್ಯೆ

ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

35 mins ago

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ₹32 ಲಕ್ಷ ದರೋಡೆ

ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…

37 mins ago

ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಬಟ್ಟೆ ತೊಳೆಯಲು ಬಳಕೆ!

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…

40 mins ago