News Karnataka Kannada
Sunday, May 12 2024
ಉಡುಪಿ

ಕುಂದಾಪುರ: ಬಂಟರ ಸಂಘದ ರಾಜ್ಯ ಮಟ್ಟದ ಕ್ರೀಡೋತ್ಸವ ಕಾರ್ಯಕ್ರಮ

Kundapur: Bantara Sangha's state-level sports festival programme
Photo Credit : News Kannada

ಕುಂದಾಪುರ: ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು.

ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಬಂಟರ ಸಂಘದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ ಮಾತನಾಡಿ ಸಂಘಟನೆ ಮೂಲಕ ಒಗ್ಗಟ್ಟನ್ನು ತೋರ್ಪಡಿಸಬಹು, ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ ಕ್ರೀಡಾಕೂಟಗಳಿಂದ ಸಾಧ್ಯವಾಗುತ್ತದೆ ಎಂದರು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಬಂಟರ ಸಂಘ ಬೆಂಗಳೂರು ಅಧ್ಯಕ್ಷ ಮುರಳೀಧರ ಹೆಗ್ಡೆ, ಸಂಘದ ಗೌರವಾಧ್ಯಕ್ಷ ಬಿ. ಉದಯಕುಮಾರ್ ಶೆಟ್ಟಿ,ಕುಂದಾಪುರ ವಕೀಲರ ಸಂಘ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಮಹಾಲಿಂಗೇಶ್ವರ ಕನ್‌ಸಕ್ಷನ್ ಆ್ಯಂಡ್ ಕಂಪೆನಿ ಉಪ್ಪುಂದದ ಮ್ಯಾನೇಜಿಂಗ್ ಡೈರೆಕ್ಟರ್ ಗೋಕುಲ್ ಶೆಟ್ಟಿ,ಲಯನ್ಸ್ ನಿಕಟ ಪೂರ್ವ ಗವರ್ನರ್ ವಿಶ್ವನಾಥ ಶೆಟ್ಟಿ,ಅರುಣ್ ಕುಮಾರ್ ಹೆಗ್ಡೆ ಕುಂದಾಪುರ, ನಕ್ಷತ್ರ ಜುವೆಲ್ಲರ್ಸ್ ಮಾಲಕ ನವೀನ್ ಹೆಗ್ಡೆ, ಬಂಟರ ಯಾನೆ ನಾಡವರ ಸಂಘ ಬ್ರಹ್ಮಾವರದ ಅಧ್ಯಕ್ಷ ಮೈರ್ಮಾಡಿ ಸುಧಾಕರ ಶೆಟ್ಟಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಬೈಂದೂರು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಾಕಟ್ಟೆ ಯುವ ಮೆರಿಡಿಯನ್ ಪಾಲುದಾರ ವಿನಯ್‌ ಕುಮಾರ್ ಶೆಟ್ಟಿ, ಅಶೋಕ್‌ ಕುಮಾರ್ ಶೆಟ್ಟಿ ಸಂಸಾಡಿ, ದಯಾನಂದ ಶೆಟ್ಟಿ ಕಟಪಾಡಿ, ಯುವಜನ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದು, ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಉದಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬನ್ನೂರು, ಕೋಶಾಧಿಕಾರಿ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕ್ರೀಡಾಕೂಟದ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು