ಕುಂದಾಪುರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಅವರು ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಲುವಾಗಿ ಮಂಗಳವಾರ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಬೃಹತ್ ಮೆರವಣೆಗೆ ಮುಖೇನ ತ್ರಾಸಿ ಯಿಂದ ಬೈಂದೂರು ತನಕ ಸಾಗಿತು
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಸರಿ ಶಲ್ಯವನ್ನು ಧರಿಸಿರುವುದು ಬಿಜೆಪಿ ಪಕ್ಷದ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.
ನಾಮಪತ್ರ ಸಲ್ಲಿಕೆ ಸಮಯದಲ್ಲಿ ಕೆ.ಗೋಪಾಲ ಪೂಜಾರಿ ಅವರ ಬೆಂಬಲಿತ ಕಾರ್ಯಕರ್ತರು ಕೇಸರಿ ಶಾಲನ್ನು ಧರಿಸಿಕೊಂಡು ರಾಜಕೀಯ ಲಾಭಕ್ಕಾಗಿ ಬಂದಿರುವುದು ನಾಚಿಗೇಡಿನ ಸಂಗತಿ ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ.
ಕೇಸರಿ ಶಾಲು ಗೋರಕ್ಷರ ಹೆಗಲ ಮೇಲೆ ಇರಬೇಕಾದದ್ದು,ಆದರೆ ಗೋ ಭಕ್ಷಕರಾದ ನೀವು ಕೇಸರಿ ಶಾಲನ್ನು ಹಾಕಿಕೊಳ್ಳುವುದರ ಮುಖೇನ ಹಿಂದೂ ಸಂಘಟನೆಗಳಿಗೆ ಅವಮಾನ ಮಾಡಿದ್ದಿರಿ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಹರಿಹಾಯ್ದಿದ್ದಾರೆ.
ಭಗವಧ್ವಜ ಕಂಡರೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉರಿದು ಬೀಳುತ್ತಾರೆ, ಗೋಪಾಲ ಪೂಜಾರಿ ಅವರೇ ಕೇಸರಿ ಶಲ್ಯವನ್ನು ಧರಿಸಿರುವ ಮರ್ಮ ಏನೆಂದು ಹಿಂದೂ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.