News Karnataka Kannada
Monday, April 29 2024
ಉಡುಪಿ

ಕುಂದಾಪುರ: ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯ ಕಾಂಗ್ರೆಸ್ ಪಕ್ಷ ಸೇರ್ಪಡೆ

Kundapur: Bjp-backed panchayat member joins Congress
Photo Credit : News Kannada

ಕುಂದಾಪುರ: ತ್ರಾಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ, ಗುಜ್ಜಾಡಿ ಗ್ರಾಮ ಪಂಚಾಯತ್ ಸದಸ್ಯ ಶೇಖರ್ ದೇವಾಡಿಗ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾಜಿ ಅಧ್ಯಕ್ಷ ರೆನ್ಸಮ್ ಪಿರೇರಾ ಮೊವಾಡಿ ಅವರು ತ್ರಾಸಿ, ಗುಜ್ಜಾಡಿ, ಮೊವಾಡಿ ಭಾಗದ ಬಿಜೆಪಿ ಕಾರ್ಯಕರ್ತರೊಂದಿಗೆ ಬೈಂದೂರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ  ಪ್ರದೀಪ್ ಕುಮಾರ್ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಶರತ್ ಕುಮಾರ್ ಶೆಟ್ಟಿ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಮುನಾ ಪೂಜಾರಿ, ಗುಜ್ಜಾಡಿ ಗ್ರಾಮೀಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ರಾಜು ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು‌.

ಬಿಜೆಪಿ ಕಾರ್ಯಕರ್ತರಾದ ಮಂಜುನಾಥ,ಜೋಸೆಫ್ ಮೊವಾಡಿ,ನಾಗರಾಜ್ ಆಚಾರ್ಯ,ಆಲ್ಟನ್,ಕೀರ್ತನ್, ರಮೇಶ್ ತ್ರಾಸಿ,ಗಿರೀಶ್ ಮೊವಾಡಿ,ಚಂದ್ರ,ರವೀಂದ್ರ, ರಾಘವೇಂದ್ರ ಆಚಾರ್ಯ, ವಾಸುದೇವ ಆಚಾರ್ಯ, ವಿಶ್ವನಾಥ ದೇವಾಡಿಗ, ಹರೀಶ್ ಮೊವಾಡಿ, ಜೊಸೆಫ್ ಡಿ ಸೋಜ್, ಜಾನ್, ರಮಾನಂದ ಅಚಾರ್ಯ, ಆದರ್ಶ ಹೆಬ್ಬಾರ್, ಆರುಣ್ ದೇವಾಡಿಗ, ಸುನೀಲ್ ಪೂಜಾರಿ, ರತ್ನಾಕರ್ ಆಚಾರ್ಯ, ಗೋಪಾಲ ಆಚಾರ್ಯ ಮತ್ತಿತರರು ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ಶಾಲನ್ನು ನೀಡಿ ಬರಮಾಡಿಕೊಳ್ಳಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು