Categories: ಉಡುಪಿ

ಕುಂದಾಪುರ: ಸಂಘಟನಾತ್ಮಕ ಶಕ್ತಿಯಿಂದ ಬೆಜೆಪಿಗೆ ಗೆಲುವು

ಕುಂದಾಪುರ: ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬದಲಾಯಿಸುವ ಮೂಲಕ ಹೊಸ ಪ್ರಯೋಗ ನಡೆಸಿದೆ,ಇಂತಹ ಹೊಸ ಪ್ರಯೋಗ ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ,ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯಿಂದ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಬಿಜೆಪಿ ಸುಲಭ ಜಯ ಸಾಧಿಸಲಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಬಿಜೆಪಿ ಎಲ್ಲಾ ವರ್ಗದ ಜನರಿಗೂ ಅದರಲ್ಲಿಯೂ ವಿಶೇಷ ಮೀನುಗಾರರ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದೆ,ನಾಡದೋಣಿ ಮೀನುಗಾರರಿಗೆ ಸಮರ್ಪಕ ಸೀಮೆಎಣ್ಣೆ ವಿತರಿಸಿರುವುದಲ್ಲದೇ,ಡೀಸೆಲ್ ಸಬ್ಸಿಡಿಯನ್ನು 2ಲಕ್ಷ ಕೆ.ಎಲ್‍ಗೆ ಹೆಚ್ಚಿಸಿದೆ ಎಂದ ಅವರು ಮರವಂತೆ ಹೊರ ಬಂದರು ಕಾಮಗಾರಿಯ ಆರಂಭಿಕ ನಕ್ಷೆಯೆ ಅವೈಜ್ಞಾನಿಕವಾಗಿದ್ದು,ಬಂದರು ಅಭಿವೃದ್ಧಿ ಕಾಮಗಾರಿಗೆ ಅನುದಾನ ಮಂಜೂರಾದರು ಕಾಮಗಾರಿ ನಡೆಸದ ಬಗ್ಗೆ ಅಧಿಕಾರಿಗಳ ಮೂಲಕ ಮಾಹಿತಿ ಪಡೆಯಲಾಗುವುದು ಎಂದರು.

ಶಾಸಕ ಸುಕುಮಾರ ಶೆಟ್ಟಿ ಯವರು ಪ್ರಚಾರಕ್ಕೆ ಬಾರದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಶಾಸಕರಿಗೆ ಗುರುರಾಜ ಗಂಟಿಹೊಳೆ ಪರ ಅಭಿಮಾನವಿದ್ದು ಶೀಘ್ರ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮೋದ್ ಮಧ್ವರಾಜ್ ಬಿಜೆಪಿ ಪಕ್ಷದಲ್ಲಿ ಗಾಳ ಹಾಕುತ್ತಾ ಕುಳಿತ್ತಿದ್ದಾರೆ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಲೂಟಿ ಮಾಡಿ ಸಾಮ್ರಾಜ್ಯ ಕಟ್ಟುವುದಕ್ಕಿಂತ ಗಾಳ ಹಾಕಿ ಮೀನು ಹಿಡಿಯುವುದೇ ಶ್ರೇಷ್ಟ ಕಾಯಕ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,ಶೋಭಾ ಪುತ್ರನ್,ಶಿರೂರು ಶಕ್ತಿ ಕೇಂದ್ರದ ಅಧ್ಯಕ್ಷ ಜಗ್ನನಾಥ ಮೊಗವೀರ, ತಾ.ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ .ಕೆ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ ಉಪ್ಪುಂದ,ಗೋಪಾಲ ಕಾಂಚನ್,ಅನಿತಾ ಆರ್.ಕೆ,ತಾ.ಪಂ ಮಾಜಿ ಸದಸ್ಯೆ ಶ್ಯಾಮಲ ಕುಂದರ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ,ಭಾಗೀರಥಿ ಸುರೇಶ್,ಬೈಂದೂರು ಮಾಧ್ಯಮ ಸಂಚಾಲಕ ಗಣೇಶ ಗಾಣಿಗ ಉಪ್ಪುಂದ ಉಪಸ್ಥಿತರಿದ್ದರು.

Sneha Gowda

Recent Posts

ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್​​ ಶಾ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್​​ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…

20 mins ago

ತಾಪಮಾನ ಏರಿಕೆ: ದೇಹಕ್ಕೆ ಪ್ರತಿದಿನ 2-3 ಲೀಟರ್​ ನೀರು ಅತ್ಯಗತ್ಯ

ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…

52 mins ago

ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ…

1 hour ago

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

9 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

9 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

10 hours ago