ಕುಂದಾಪುರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ದಂಪತಿಯೊಂದಿಗೆ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಗುರುವಾರ ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರಾದ ಡಾ.ಎನ್.ನರಸಿಂಹ ಅಡಿಗ, ಕೆ.ವಿ.ಶ್ರೀಧರ ಅಡಿಗ, ಡಾ.ರಾಮಚಂದ್ರ ಭಟ್ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಮತ್ತು ಸಮಿತಿ ಸದಸ್ಯರು,ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನವೆಂಬರ್ ತಿಂಗಳಿನಲ್ಲಿ ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತೆರಳಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನವನ್ನು ಪಡೆದುಕೊಂಡಿದ್ದರು. ಮುಖ್ಯ ಮಂತ್ರಿ ಆದ ಬಳಿಕ ಇದು ಕೊಲ್ಲೂರಿಗೆ ಎರಡನೇ ಭೇಟಿ ಆಗಿದೆ.