Categories: ಉಡುಪಿ

ಕುಂದಾಪುರ: ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ

ಕುಂದಾಪುರ: ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜೆಕಟ್ಟೆ ವಿಶ್ವನಾಥ ಶಾನುಭೋಗ್ ಅವರ ಮನೆ ಮೇಲೆ ಮೂರು ತೆಂಗಿನ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು 1.50 ಲಕ್ಷ.ಕ್ಕೂ ಅಧಿಕ ಹಣ ನಷ್ಟ ಉಂಟಾದ ಘಟನೆ ಭಾನುವಾರ ನಡೆದಿದೆ.

ಮರವಂತೆ ಭಾಗದಲ್ಲಿ ಭಾನುವಾರ ರಾತ್ರಿ ಕಾಣಿಸಿಕೊಂಡಿದ್ದ ಭಾರಿ ಮಳೆ ಗಾಳಿಗೆ ತೆಂಗಿನ ಮರ ವಿಶ್ವನಾಥ ಶಾನುಭೋಗ್ ಮನೆ ಮೇಲೆ ಉರುಳಿ ಬಿದ್ದು ಮನೆಗೆ ಹಾನಿ ಆಗಿದ್ದು ಮಾತ್ರವಲ್ಲದೆ ಜಗುಲಿಯಲ್ಲಿ ಮಲಗಿದ್ದ ಅವರ ತಲೆ ಮೇಲೆ ಹೆಂಚಿನ ತುಂಡುಗಳು ಉರುಳಿ ಬಿದ್ದ ಪರಿಣಾಮ ಗಾಯವಾಗಿದೆ. ಮರವಂತೆ ಅನಂತ ಶೆಣೈ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಕೂಡ ನಡೆದಿದೆ. ಘಟನೆಯ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Sneha Gowda

Recent Posts

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

19 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

26 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

32 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

48 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

1 hour ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

1 hour ago