News Karnataka Kannada
Thursday, May 02 2024
ಉಡುಪಿ

ಕುಂದಾಪುರ: ಸಾಮಾನ್ಯ ಕಾರ್ಯಕರ್ತನಿಗೆ ಬೈಂದೂರು ಕ್ಷೇತ್ರದಲ್ಲಿ ಗೆಲುವು- ತೇಜಸ್ವಿ ಸೂರ್ಯ

Kundapur: Common activist wins in Byndur constituency- Tejaswi Surya
Photo Credit : News Kannada

ಕುಂದಾಪುರ: ನರೇಂದ್ರ ಮೋದಿಜೀ ಅವರ ಜನಪ್ರಿಯ ಆಡಳಿತ ಮತ್ತು ರಾಜ್ಯ ಸರಕಾರವು ಕೈಗೊಂಡ ಜನೋಪಯೋಗಿ ಅಬಿವೃದ್ಧಿ ಕೆಲಸಗಳಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಸಾಮಾನ್ಯ ಕಾರ್ಯಕರ್ತನನ್ನು ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ಯುವಕರ ನಾಯಕತ್ವಕ್ಕೆ ಮನ್ನಣೆ ನೀಡಬೇಕೆಂದು ರಾಜ್ಯ ಯುವಮೋರ್ಚಾ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಬೈಂದೂರು ಬಿಜೆಪಿ ಕಛೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮರವಂತೆ ಮೀನುಗಾರರು ಚುನಾವಣೆ ಬಹಿಷ್ಕಾರದಂತಹ ನಿರ್ಧಾರವನ್ನು ಕೈಬಿಡಬೇಕು ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು.

ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ಮಾತನಾಡಿ ಬೈಂದೂರು ಕ್ಷೇತ್ರ ಈ ಬಾರಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಕಾರ್ಯಕರ್ತರ ಸಂಘಟನೆಯ ಹೋರಾಟದಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ದೇವಾಡಿಗ, ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು