ಕುಂದಾಪುರ: ಶಾಸ್ತ್ರದಲ್ಲಿರುವ ಸಪ್ತ ಅರ್ಥ ಗರ್ಭಿತ ಹೆಜ್ಜೆಯ ಜೊತೆಯಲ್ಲಿ ಸಪ್ತ ಆದರ್ಶಗಳ ಸಂಕಲ್ಪವನ್ನು ಮಾಡುವ ಮುಖೇನ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ಸಂಚಾಲಕ ಯಶವಂತ್ ಗಂಗೊಳ್ಳಿ ದಾಂಪತ್ಯ ಜೀವನಕ್ಕೆ ಕಾ ಲಿರಿಸಿ ಸಮಾಜಕ್ಕೆ ಮಾದರಿ ಸಂದೇಶವನ್ನು ರವಾನಿಸಿದ್ದಾರೆ.
ಸಮಾಜ ಮುಖಿ ಚಿಂತನೆಗಳೊಂದಿಗೆ ಹಿಂದೂ ಜಾಗರಣವೇದಿಕೆಯ ಸಂಚಾಲಕರಾಗಿ ಕೆಲಸವನ್ನು ನಿರ್ವಹಿಸುತ್ತಿರುವ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ್ ಗಂಗೊಳ್ಳಿ ಅವರು ತಮ್ಮ ಮದುವೆ ದಿನವನ್ನು ಅವಿಸ್ಮರಣೀಯವಾಗಿ ಇರಿಸಬೇಕು ಎನ್ನುವ ದೃಷ್ಟಿಯಿಂದ ಏಳು ಮಹತ್ವದ ದಾನಗಳನ್ನು ಮಾಡಿ ಸಮಾಜಕ್ಕೆ ಮಾದರಿ ಆಗಿದ್ದಾರೆ. ಪತಿಯ ದಾನ ಪ್ರಕ್ರಿಯೆಗೆ ಪತ್ನಿ ಕೂಡ ಸಾಥ್ ನೀಡಿದ್ದು ಅಂಗಾಂಗ ದಾನಕ್ಕೆ ಸಹಿ ಹಾಕಿ ನವ ಜೀವನಕ್ಕೆ ಮುನ್ನುಡಿ ಬರೆದಿದ್ದಾರೆ.
ಏಳು ಪ್ರಮುಖ ದಾನಗಳು
1.ದಂಪತಿಗಳಿಂದ ಅಂಗಾಂಗ ದಾನಕ್ಕೆ ಸಹಿ
2.100 ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಜವಾಬ್ದಾರಿ
3.ಗೋ ದತ್ತು ಸ್ವೀಕಾರ
4.ರಕ್ತದಾನ
5.ಸೇನಾ ನಿಧಿಗೆ ಮೌಲ್ಯರ್ಪಣೆ
6.ರಾಮ ಮಂದಿರಕ್ಕೆ ಕಾಣಿಕೆ ಸಮರ್ಪಣೆ
7.ಮಂಗಳ ನಿಧಿ ಕಾರ್ಯಕ್ರಮ
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.