ಕುಂದಾಪುರ: ಪ್ರಾಣಿ ಪಕ್ಷಿಗಳಲ್ಲಿ ಯಾವುದೇ ರೀತಿಯ ಬದಲಾವಣೆಯ ಕ್ರಿಯೆಗಳು ಇಲ್ಲದೆ ಅವುಗಳ ಜೀವನ ಕ್ರಮ ಒಂದೇ ರೀತಿಯಲ್ಲಿ ಸಾಗುತ್ತಿದೆ ಆದರೆ ಮಾನವನು ಸಹಜ ಬದುಕಿಗೆ ವಿರುದ್ಧವಾಗಿ ಬದುಕುತ್ತಿದ್ದರಿಂದ ಪ್ರಕೃತಿಯ ಅಸಮತೋಲನಕ್ಕೆ ಕಾರಣವಾಗಿದೆ ಎಂದು ಭಾಸ್ಕರ್ ಉಡುಪ ಹೇಳಿದರು.
ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿ ಎಸ್.ವಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಕೃತಿ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಸುಗುಣ ಆರ್.ಕೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಚಂದ್ರಕಲಾ ಸ್ವಾಗತಿಸಿದರು. ಗಿರೀಶ್ ಖಾರ್ವಿ ವಂದಿಸಿದರು. ಕ್ಲಬ್ಬಿನ ಸದಸ್ಯರು ಭಾಗವಹಿಸಿದ್ದರು.