News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆ ಮಾಹಿತಿ ಕಾರ್ಯಾಗಾರ

Kaar
Photo Credit : News Kannada

ಕುಂದಾಪುರ: ಮಹಿಳೆ ದೇಶದ ಸಂಪತ್ತು,ಪ್ರತಿ ಹಂತದಲ್ಲಿಯೂ ಮಹಿಳೆಗೆ ರಕ್ಷಣೆ ನೀಡುವುದು ಸರಕಾರದ ಜವಾಬ್ದಾರಿಯಾಗಿದೆ, ಮಹಿಳಾ ಸಬಲೀಕರಣದ ಕನಸು ನನಸಾದರೆ ಮಾತ್ರ ದೇಶ ಅಭಿವೃದ್ಧಿಗೊಳ್ಳಲಿದೆ ಎಂದು ತರಬೇತಿ ಸಹಾಯಕರಾದ ಕವಿತಾ ಗಾಣಿಗ ಹೇಳಿದರು.

ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಸೌಪರ್ಣಿಕಾ ಸಂಜೀವಿನಿ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಹೊಸಾಡು ಅವರ ಸಹಯೋಗದಲ್ಲಿ ಹೊಸಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಮಟ್ಟದ ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಕುಂದಾಪುರ ತಾಲೂಕು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಜಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಎಫ್‍ಎಲ್‍ಸಿಆರ್‍ಪಿ ಸಿತಾರ ಅವರು ಸಂಜೀವಿನಿ ಸಂಘದ ವ್ಯವಹಾರ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು, ಹೊಸಾಡು ಗಣೇಶ್ ಸೊಸೈಟಿ ಸಲಹೆಗಾರ ವಿಶ್ವಂಭರ ಐತಾಳ್ ಬ್ಯಾಂಕಿಂಗ್ ಸೌಲಭ್ಯದ ಕುರಿತು ವಿವರಿಸಿದರು.

ಸಂಜೀವಿನಿ ಒಕ್ಕೂಟದ ತಾಲೂಕು ಕಾರ್ಯದರ್ಶಿ ಪ್ರೇಮ ಶೆಟ್ಟಿ,ಹೊಸಾಡು ಒಕ್ಕೂಟದ ಅಧ್ಯಕ್ಷೆ ವಂದನಾ ಖಾರ್ವಿ, ಎಲ್‍ಸಿಆರ್‍ಪಿ, ಎಂಬಿಕೆ ಮತ್ತು ಸವಿತಾ ಭಂಡಾರಿ, ವಸಂತಿ ದೇವಾಡಿಗ, ಚೈತ್ರಾ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು