ಕುಂದಾಪುರ: ದಿ.ಎಮ್ ರಘುರಾಮ್ ಶೆಟ್ಟಿ ಅವರ ಸ್ಮರಣಾರ್ಥವಾಗಿ ಚಿತ್ತೂರನಲ್ಲಿ ನಿರ್ಮಿಸಲಾದ ಗೋಲ್ಡನ್ ಟ್ರೈಯಾಂಗಲ್ ಸಾರ್ವಜನಿಕ ಬಸ್ ನಿಲ್ದಾಣವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಶುಕ್ರವಾರ ಉದ್ಘಾಟಿಸಿ ಎಂ.ರಘುರಾಮ ಶೆಟ್ಟಿ ಅವರ ಪುತ್ತಳಿ ಅನಾವರಣಗೊಳಿಸಿದರು.
ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ, ಚಿತ್ತೂರು ಗ್ರಾ.ಪಂ ಅಧ್ಯಕ್ಷೆ ಜಯಂತಿ ಪೂಜಾರಿ, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾರಣಕಟ್ಟೆ ದೇವಳದ ಅನುವಂಶಿಕ ಆಡಳಿತ ಮುಖ್ಯಸ್ಥರಾದ ಸದಾಶಿವ ಶೆಟ್ಟಿ, ಡಾ.ಅತುಲ್ ಕುಮಾರ್, ಬಾಬು ಹೆಗ್ಡೆ, ಜಯನಂದ್ ಹೋಳಿಧರ್, ಶಂಕರ ಪೂಜಾರಿ, ರೀಹಿತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.