News Karnataka Kannada
Thursday, May 09 2024
ಉಡುಪಿ

ಕುಂದಾಪುರ: ಗುರುರಾಜ್ ಗಂಟಿಹೊಳೆ ಬೈಂದೂರು ಚೌಕೀದಾರ್- ಕೋಟ ಶ್ರೀನಿವಾಸ ಪೂಜಾರಿ

Kundapur: Gururaj Gantihole Bainduru Chowkidar- Kota Srinivasa Pujari
Photo Credit : News Kannada

ಕುಂದಾಪುರ: ಜನಸಾಮಾನ್ಯರ ನೋವು, ನಲಿವುಗಳನ್ನು, ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಬಲಿಷ್ಟವಾಗಿ ಮಂಡನೆ ಮಾಡುವ ತಾಕತ್ತನ್ನು ಹೊಂದಿರುವ ರಾಷ್ಟ್ರೀಯತೇಯ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಪ್ರಯತ್ನಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಇದು ವ್ಯಕ್ತಿಗಳ ನಡುವೆ ನಡೆಯುವ ಚುನಾವಣೆ ಅಲ್ಲಾ ಸೈದ್ಧಾಂತಿಕ ನಿಲುವಿನೊಂದಿಗೆ ನಡೆಯುವ ಚುನಾವಣೆ ಆಗಿದೆ. ಯುವಜನರ ರಣೋತ್ಸವ ನೋಡಿದರೆ ಗಂಟಿಹೊಳೆ ಅವರನ್ನು ಗೆಲ್ಲಿಸುವ ಸಂಕಲ್ಪವನ್ನು ಮಾಡಿದ್ದಾರೆ ಎನ್ನುವುದಕ್ಕೆ ಸಮಾವೇಶದಲ್ಲಿ ಸೇರಿದ ಜನಸಾಗರದ ಮೂಲಕ ಉತ್ತರ ಸಿಕ್ಕಿದೆ.ವ್ಯಕ್ತಿಗತವಾಗಿ ಯಾರನ್ನು ನಾನು ಭಯೋತ್ಪಾದಕ ಎಂದು ಹೇಳಿಲ್ಲ ಗೋಪಾಲ ಪೂಜಾರಿ ಅವರನ್ನು ಬೆಂಬಲಿಸುವ ಪಕ್ಷ ಭಯೋತ್ಪಾದಕರಿಗೆ ಸಹಕಾರ ನೀಡುತ್ತದೆ ಎಂದು ಹೇಳಿದ್ದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಸಣ್ಣ ಸಣ್ಣ ಜಾತಿಗಳ 21 ಅಭಿವೃದ್ಧಿ ನಿಗಮಗಳನ್ನು ಜಾರಿ ಮಾಡಿದ್ದೇವೆ,ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಮಾಡಿದ್ದೆ ಬಿಜೆಪಿ ಸರಕಾರ. ರಾಜಕಾರಣಿಗಳ ವಿರೋಧಿಗಳಿಗೆ ಗಂಟಿಹೊಳೆ ಅವರು ಹೆದರುವ ಪ್ರಮಯವೇ ಇಲ್ಲ ಎಂದರು.

ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ ದೇಶ, ರಾಷ್ಟ್ರೀಯತೆ ಎನ್ನುವ ಮನೋಭಾವದಿಂದ ಒಗ್ಗಟ್ಟಿನಿಂದ ಹೋರಾಟಮಾಡಿ ಬಡವರ ಮನೆ ಹುಡುಗನಿಗೆ ಜನಸೇವೆ ಮಾಡಲು ಒಂದು ಒಳ್ಳೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.ಬೈಂದೂರಿನಲ್ಲಿ ಕುಡಿಯುವ ನೀರಿನ ದಾಹವನ್ನು ನಿಗಿಸಲು 780 ಕೋಟಿ.ರೂ ವೆಚ್ಚದಲ್ಲಿ ಮನೆ ಮನೆಗೆ ಕುಡಿಯುವ ನೀರನ್ನು ಒದಗಸಿಕೊಡುವ ಕೆಲಸ ನಡೆಯುತ್ತಿದೆ ಎಂದರು.

ಸಚಿವ ಸುನೀಲ್ ಕುಮಾರ್ ಮಾತನಾಡಿ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯ ಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕ ನಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ಕರಾವಳಿ ಜನರು ಅನುಭವಿಸಬೇಕಾಗುತ್ತದೆ ಇದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೇಳಿಕೊಂಡರು.

ಬೈಂದೂರು ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮತ್ತು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಬ್ರಿಜೇಶ್ ಚೌಟಾಲ, ಪ್ರಣಯ್ ಕುಮಾರ್ ಶೆಟ್ಟಿ,ಅಡಂತ್ಯಾಯ,ಸುರೇಶ್ ಶೆಟ್ಟಿ, ಸುರೇಶ ಬಟವಾಡಿ, ಪ್ರಿಯದರ್ಶಿನಿ, ರೋಹಿತ್ ಕುಮಾರ್ ಶೆಟ್ಟಿ,ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು.ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಟಸ್ಥರಾಗಿ ಅಸಮಾಧಾನ: ಬೈಂದೂರು ಕ್ಷೇತ್ರದ ಹಾಲಿ ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗ್ಡೆ, ಉದ್ಯಮಿ ಗೋವಿಂದ ಬಾಬು ಪೂಜಾರಿ, ನಿತಿನ್ ನಾರಾಯಣ್ ಅವರು ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸದೆ ತಟಸ್ಥ ರಾಗಿದ್ದು ಪಕ್ಷದ ಚಟುವಟಿಕೆಗಳಿಗೆ ಯಾವುದೇ ರೀತಿಯ ಬೆಂಬಲ ಇಲ್ಲಿ ತನಕ ಘೋಷಣೆ ಮಾಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು