ಕುಂದಾಪುರ: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮಾಂತರ ಪ್ರದೇಶದ ಜನರಿಗೆ ವರದಾನವಾಗಿದ್ದು ಜನರ ಜೀವನೋಪಾಯೋಗಕ್ಕೆ ಅನುಕೂಲ ಮಾಡಿಕೊಟ್ಟಿದೆ.
ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರ ಮುಖೇನ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆಗೈದು ನಗದು ಪುರಸ್ಕಾರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಉಡುಪಿ ಜಿಲ್ಲೆಯಲ್ಲೆ ಅತಿ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿದ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದ ಹಕ್ಲಾಡಿ ಪಂಚಾಯತ್ 2022-23 ನೇ ಸಾಲಿನಲ್ಲಿ 26,000 ಮಾನವ ದಿನಗಳನ್ನು ಸೃಜನೆ ಮಾಡಿದ್ದು ಕೂಲಿ ಮತ್ತು ಸಲಕರಣೆಗೆ ಸೇರಿ 96.60 ಲಕ್ಷ.ರೂ ವ್ಯಯಿಸಿದೆ.