ಕುಂದಾಪುರ: ಬಹು ನಿರೀಕ್ಷಿತ 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಂಡಿದೆ.
124 ಕ್ಷೇತ್ರಗಳಿಗೆ ಅನ್ವಯವಾಗುವಂತೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ನಿರೀಕ್ಷೆಯಂತೆ ಬೈಂದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದಾರೆ.
ಬಹಳಷ್ಟು ಕೂತುಹಲವನ್ನು ಮೂಡಿಸಿದ ಕುಂದಾಪುರ ಕ್ಷೇತ್ರಕ್ಕೂ ಅಭ್ಯಥಿರ್üಯನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ಈ ಸಲ ಹೊಸ ಮುಖಕ್ಕೆ ಮಣೆಹಾಕಿದೆ.ಮೊಳಹಳ್ಳಿ ಎಂ.ದಿನೇಶ್ ಹೆಗ್ಡೆ ಅವರು ಕುಂದಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.ಕುಂದಾಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಶ್ಯಾಮಲ ಭಂಡಾರಿ,ಕಿಶನ್ ಹೆಗ್ಡೆ ಕೊಳ್ಕೆಬೈಲು,ಅಶೋಕ ಪೂಜಾರಿ ಬಿಜಾಡಿ ಅವರು ಟಿಕೆಟ್ಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.
ಬೈಂದೂರು ಮತ್ತು ಕುಂದಾಪುರ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ವತಿಯಿಂದ ಅಭ್ಯರ್ಥಿಗಳ ಆಯ್ಕೆ ಆಗದೆ ಇರುವುದರಿಂದ,ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲು ಇಚ್ಚಿಸಿದ ಸಾಂಭವ್ಯ ಅಭ್ಯರ್ಥಿಗಳ ಮನದಲ್ಲಿ ಆಸೆ ಇನ್ನೂ ಕೂಡ ಹಸಿರಾಗಿ ಉಳಿದಿದೆ.