ಕುಂದಾಪುರ: ಮನೆಯೊಳಗೆ ನುಗ್ಗಿದ ಚಿರತೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ಕಳೆದ ತಡ ರಾತ್ರಿ ನಡೆದಿದೆ.
ಕೊಲ್ಲೂರು ಸಮೀಪದ ನಾಗೋಡಿ ನಿವಾಸಿ ಗಣೇಶ್ (48) ಎನ್ನುವವರು ಚಿರತೆ ದಾಳಿಗೆ ಒಳಗಾಗಿದ್ದ ವ್ಯಕ್ತಿ. ನಾಯಿಯನ್ನು ಬೇಟೆಯಾಡಲು ಬಂದಿದ್ದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಬೆದರಿದ ನಾಯಿ ಮನೆಯೊಳಗೆ ನುಗಿದ್ದು, ನಾಯಿಯನ್ನು ಬೆನ್ನಟ್ಟಿ ಬಂದಿದ್ದ ಚಿರತೆ ಸಹ ಮನೆಯೊಳಗೆ ನುಗ್ಗಿದೆ. ಈ ವೇಳೆ ಗಣೇಶ್ ಎನ್ನುವವರ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಕೂಡಲೇ ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.