Categories: ಉಡುಪಿ

ಕುಂದಾಪುರ: ಶಾಸಕ ಗುರುರಾಜ್ ಗಂಟಿಹೊಳೆಗೆ ಅದ್ದೂರಿ ಸ್ವಾಗತ

ಕುಂದಾಪುರ: ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ ಬೈಂದೂರು ವಿಧಾನಸಭೆ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಗುಜ್ಜಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.

ತೆರೆದ ವಾಹನದಲ್ಲಿ ಗುಜ್ಜಾಡಿ ಪರಿಸರದ ವಿವಿಧೆಡೆ ರೋಡ್ ಶೋ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡಿ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕರ್ತರ ಶಾಸಕನಾಗಿ ಕಾರ್ಯ ನಿರ್ವಹಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.

ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ,ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಪಂ ಸದಸ್ಯರು, ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷರು,ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

Ashika S

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

5 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

5 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

5 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

6 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

6 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

7 hours ago