ಕುಂದಾಪುರ: ಕಿರಿಮಂಜೇಶ್ವರ ಹೊಸಹಿತ್ಲು,ಮರವಂತೆ ಕಡಲ ತೀರದ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಮೀನುಗಾರರ ಸಮಸ್ಯೆಗಳನ್ನು ಆಲಿಸಿದರು.
ಶಾಸಕ ಗುರುರಾಜ್ ಗಂಟಿಹೊಳೆ ಅವರು ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು,ಆದ್ರಗೋಳಿ ಹಾಗೂ ಮರವಂತೆಯ ಕಡಲ ತೀರದ ಪ್ರದೇಶಗಳ ಕಡಲ್ಕೊರೆತ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮೀನುಗಾರಿಕಾ ಇಲಾಖೆಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪ ಕುಮಾರ್ ಶೆಟ್ಟಿ ಉದಯ ಕುಮಾರ್, ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾಸಮಿತಿ ಅಧ್ಯಕ್ಷರ ವಾಸುದೇವ ಖಾರ್ವಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಲೋಕೇಶ್ ಖಾರ್ವಿ,ಚಂದ್ರ ಕಾರ್ವಿ,ಅನಿತಾ ಆರ್ ಕೆ ,ಶಂಕರ್ ಖಾರ್ವಿ, ಮೀನುಗಾರರ ಮುಖಂಡರು ಉಪಸ್ಥಿತರಿದ್ದರು.